Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:6 - ಕನ್ನಡ ಸಮಕಾಲಿಕ ಅನುವಾದ

6 ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ತಿಮೊಥೆಯನು ಈಗಲೇ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಶುಭವರ್ತಮಾನವನ್ನು ಹೇಳಿ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀರೆಂಬದನ್ನು ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಅತ್ತಾ, ತಿಮೊತಿ ಅಮ್ಚೆಕ್ಡೆ ತುಮ್ಚೆಕ್ನಾ ಪರ್ತುನ್ ಯೆಲಾ, ಅನಿ ಯೆತಾನಾ ತುಮ್ಚ್ಯಾ ವಿಶ್ವಾಸಾಚಿ ಅನಿ ಪ್ರೆಮಾಚಿ ಬರಿ ಖಬರ್ ಅಮ್ಕಾ ಘೆವ್ನ್ ಯೆಲಾ, ಕನ್ನಾಬಿ ಅಮ್ಚ್ಯಾ ವಿಶಯಾತ್ ಬರೆಚ್ ಬೊಲ್ತ್ಯಾಸಿ, ಅನಿ ತುಮಿಬಿ ಅಮ್ಕಾ ಭೆಟುಚೆ ಮನುನ್ ವಾಟ್ ಬಗುಕ್ ಲಾಗ್ಲ್ಯಾಸಿ ಮನುನ್ ತೆನಿ ಅಮ್ಕಾ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:6
24 ತಿಳಿವುಗಳ ಹೋಲಿಕೆ  

ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.


ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.


ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಏಕೆಂದರೆ, ನಮ್ಮ ಕರ್ತ ಆಗಿರುವ ಯೇಸುವಿನಲ್ಲಿ ನಿನಗಿರುವ ವಿಶ್ವಾಸವನ್ನೂ ಪರಿಶುದ್ಧರೆಲ್ಲರಿಗಾಗಿ ನಿನಗಿರುವ ಪ್ರೀತಿಯನ್ನೂ ಕುರಿತು ನಾನು ಕೇಳಿದ್ದೇನೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ಪ್ರಿಯರೇ, ನಾವು ದೈಹಿಕವಾಗಿ ನಿಮ್ಮನ್ನು ಬಿಟ್ಟು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ, ನಿಮ್ಮ ಮುಖವನ್ನು ಕಾಣಲು ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.


ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಏಕೆಂದರೆ, ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆ ಹಾಗೂ ದೇವಜನರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿ ನಾವು ಕೇಳಿದ್ದೇವೆ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಆದರೆ ಈಗ ನಂಬಿಕೆ, ನಿರೀಕ್ಷೆ, ಪ್ರೀತಿ, ಈ ಮೂರೇ ಉಳಿದಿರುತ್ತವೆ. ಇವುಗಳಲ್ಲಿ ಮಹತ್ತಾದದ್ದು ಪ್ರೀತಿಯೇ.


ಇದಾದನಂತರ, ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು.


ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.


ಈ ಕಾರಣದಿಂದ ಪ್ರಿಯರೇ, ನಮ್ಮ ಎಲ್ಲಾ ಇಕ್ಕಟ್ಟು ಹಾಗೂ ಹಿಂಸೆಗಳಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು