Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:14 - ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಸತ್ತುಹೋದನೆಂದು ನಾವು ನಂಬುತ್ತೇವೆ. ಆದರೆ ಯೇಸು ಮತ್ತೆ ಜೀವಂತವಾಗಿ ಎದ್ದುಬಂದನೆಂಬುದನ್ನೂ ನಾವು ನಂಬುತ್ತೇವೆ. ಹಾಗೆಯೇ ಯೇಸುವಿನಲ್ಲಿ ವಿಶ್ವಾಸವಿಟ್ಟು ಸತ್ತುಹೋದವರನ್ನು ದೇವರು ಆತನ ಜೊತೆಯಲ್ಲಿ ಕರೆದುಕೊಂಡು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜು ಕ್ರಿಸ್ತ್ ಮರ್ಲೊ, ಅನಿ ಅನಿ ಪರ್ತುನ್ ಝಿತ್ತೊ ಹೊವ್ನ್ ಉಟ್ಲೊ ಮನುನ್ ಅಮಿ ವಿಶ್ವಾಸ್ ಕರ್ತಾಂವ್, ತೆಚ್ಯಾಸಾಟ್ನಿ ಜೆ ಕೊನ್ ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮರ್ಲ್ಯಾತ್, ತೆಂಕಾ ದೆವ್ ಕ್ರಿಸ್ತಾಚ್ಯಾ ವಾಂಗ್ಡಾ ಅನಿ ಝಿತ್ತೊ ಕರುನ್ ಉಟ್ವುತಾ ಮನುನ್ ಅಮಿ ವಿಶ್ವಾಸ್ ಕರ್‍ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:14
16 ತಿಳಿವುಗಳ ಹೋಲಿಕೆ  

ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.


ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಆ ಗುಡಾರಗಳಲ್ಲಿರುವ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳಿಗೆ ಈ ವ್ಯಾಧಿಯೇ ತಗಲುವದು.


“ಗಾದನ ಮೇಲೆ ಸೈನ್ಯವು ದಾಳಿಮಾಡುವುದು, ಕೊನೆಗೆ ಅವನೇ ಅವರನ್ನು ಓಡಿಸಿಬಿಡುವನು.


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು