Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:3 - ಕನ್ನಡ ಸಮಕಾಲಿಕ ಅನುವಾದ

3 ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಪವಿತ್ರರಾಗಿರಬೇಕೆಂಬುದು ದೇವರ ಚಿತ್ತವಾಗಿದೆ. ಆದುದರಿಂದ ನೀವು ಲೈಂಗಿಕ ಪಾಪಗಳಿಂದ ದೂರವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ಪವಿತ್ರ್ ಅನಿ ಅನೈತಿಕ್ ಲೈಂಗಿಕ್ ಸಮಂದಾಚ್ಯಾ ಬುರ್ಸ್ಯಾಪಾನಾತ್ನಾ ಎಗ್ದಮ್ ಬರೆ ಹೊಲ್ಲೆ ದೆವಾಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:3
47 ತಿಳಿವುಗಳ ಹೋಲಿಕೆ  

ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.


ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ,


ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


“ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.


ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:


ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.


ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.


ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. ನಿಮಗೆ ಶುಭವಾಗಲಿ.


ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.


ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ,” ಎಂದು ಹೇಳಿದರು.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.


ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.


ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.


ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.


ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು