Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:8 - ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆಮನುನ್ ಜೆ ಕೊನ್ ಹ್ಯಾ ಶಿಕಾಪಾಚ್ಯಾ ವಿರೊದ್ ಜಾತಾ, ತೊ ಮಾನ್ಸಾಕ್ ತಿರಸ್ಕಾರ್ ಕರಿನಾ, ಪವಿತ್ರ್ ಆತ್ಮೊ ದಿತಲ್ಯಾ ದೆವಾಕುಚ್ ತಿರಸ್ಕಾರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:8
21 ತಿಳಿವುಗಳ ಹೋಲಿಕೆ  

ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.


ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ಬುದ್ಧಿಹೀನರ ಸಂಗಡ ಮಾತಾಡಬೇಡ; ಏಕೆಂದರೆ ನಿನ್ನ ಜ್ಞಾನದ ಮಾತುಗಳನ್ನು ಅವರು ತಿರಸ್ಕರಿಸುವನು.


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.


ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.


ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಅವರಿಗೆ, ‘ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು,’ ಎಂದು ಹೇಳಿದಿರಿ. ಆದ್ದರಿಂದ ಈಗ ಯೆಹೋವ ದೇವರ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ, ನಿಮ್ಮ ಕುಲಗಳ ಪ್ರಕಾರವಾಗಿಯೂ ಬನ್ನಿರಿ,” ಎಂದನು.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.


“ ‘ತಿರಸ್ಕಾರ ಮಾಡುವವರೇ, ಗಮನಿಸಿರಿ, ಆಶ್ಚರ್ಯಪಟ್ಟು, ಚದುರಿ ಹೋಗಿರಿ, ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ ನೀವದನ್ನು ಎಂದಿಗೂ ನಂಬುವುದೇ ಇಲ್ಲ,’” ಎಂದು ಹೇಳಿದನು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು