Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:18 - ಕನ್ನಡ ಸಮಕಾಲಿಕ ಅನುವಾದ

18 ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರಿಗೆ ಎಲ್ಲಾ ಕಾಲದಲ್ಲಿಯೂ ಕೃತಜ್ಞತೆಗಳನ್ನು ಸಲ್ಲಿಸಿರಿ. ಇದುವೇ ನಿಮ್ಮ ವಿಷಯವಾಗಿ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸಗ್ಳ್ಯಾ ಎಳಾರ್ ದೆವಾಕ್ ಧನ್ಯವಾದ್ ದಿವಾ, ಕ್ರಿಸ್ತಾ ಜೆಜುಚ್ಯಾ ಎಕ್‍ವಟ್ಟಾನ್ ತುಮ್ಚ್ಯಾ ಜಿವನಾತ್ ಹೆ ಸಗ್ಳೆಚ್ ಹೊವ್ಕ್ ಪಾಜೆ ಮನ್ತಲಿ ದೆವಾಚಿ ಇಚ್ಛ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:18
11 ತಿಳಿವುಗಳ ಹೋಲಿಕೆ  

ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.


ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”


ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.


ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.


ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು