Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:10 - ಕನ್ನಡ ಸಮಕಾಲಿಕ ಅನುವಾದ

10 ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು ಯೆಹೋವನ ಆಜ್ಞಾನುಸಾರವಾಗಿ ಇಸ್ರಾಯೇಲ್ಯರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನ ಸೈನ್ಯದಲ್ಲಿ ಪರಾಕ್ರಮಿಗಳಿದ್ದರು. ಈ ಪರಾಕ್ರಮಿಗಳು ದಾವೀದನ ರಾಜ್ಯದಲ್ಲಿ ದಾವೀದನೊಂದಿಗೆ ಮಹಾಬಲಿಷ್ಠರಾದರು. ಅವರು ಮತ್ತು ಎಲ್ಲಾ ಇಸ್ರೇಲರು ದಾವೀದನಿಗೆ ಬೆಂಬಲ ನೀಡಿ ಅವನನ್ನು ರಾಜನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನದ ಪ್ರಕಾರವೇ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:10
13 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲರ ಮೇಲೆ ಅರಸನಾಗಿ ಮಾಡಲು ಹೆಬ್ರೋನಿಗೆ ಪೂರ್ಣಮನಸ್ಸಿನಿಂದ ಬಂದರು. ಇದಲ್ಲದೆ ಇಸ್ರಾಯೇಲಿನಲ್ಲಿದ್ದ ಮಿಕ್ಕಾದವರೆಲ್ಲರು ದಾವೀದನನ್ನು ಅರಸನಾಗಿ ಮಾಡಲು ಒಂದೇ ಮನಸ್ಸುಳ್ಳವರಾಗಿದ್ದರು.


ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ಯೆಹೋವ ದೇವರ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವುದಕ್ಕೆ, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿಕೊಂಡು ಬಂದ ದಂಡುಗಳ ಸಂಖ್ಯೆ ಇದು:


ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು.


ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.


ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದುಕೊಂಡು, ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು 6,800 ಮಂದಿ.


ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು.


ಇಸ್ರಾಯೇಲರು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು. ಹೇಗೆಂದರೆ, ಕುಟುಂಬಗಳ ಮುಖ್ಯಸ್ಥರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಅಧಿಪತಿಗಳೂ ವರ್ಷದ ಎಲ್ಲಾ ತಿಂಗಳುಗಳಲ್ಲಿ ಪ್ರತಿ ತಿಂಗಳು ಸರತಿಯಂತೆ ಬರುತ್ತಿದ್ದ ವರ್ಗಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿವರ್ಗದಲ್ಲಿ 24,000 ಮಂದಿಯಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು