Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:5 - ಕನ್ನಡ ಸಮಕಾಲಿಕ ಅನುವಾದ

5 ಆ ದೇಶದ ಮೂಲನಿವಾಸಿಗಳಾದ ಯೆಬೂಸಿಯರು ದಾವೀದನಿಗೆ, “ನೀನು ಇದರೊಳಗೆ ಬರಲು ಸಾಧ್ಯವಿಲ್ಲ,” ಎಂದರು. ಆದರೂ ದಾವೀದನು, ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಬೂಸಿಯರು ದಾವೀದನಿಗೆ, “ನೀನು ಒಳಗೆ ಬರಲು ಸಾಧ್ಯವಿಲ್ಲ” ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಾವೀದನು ಪಟ್ಟಣದೊಳಗೆ ಪ್ರವೇಶಿಸಲು ಎಂದಿಗೂ ಸಾಧ್ಯವಿಲ್ಲವೆಂದು ಯೆಬೂಸಿಯರು ಹೇಳಿದ್ದರು. ಆದರೂ ದಾವೀದನು ಪಟ್ಟಣವನ್ನು ಪ್ರವೇಶಿಸಿ ಸಿಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಅದು ‘ದಾವೀದ್ ನಗರ’ ಎಂದು ಹೆಸರು ಪಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ದಾವೀದನಿಗೆ - ನೀನು ಒಳಗೆ ಬರಲಾರಿ ಎಂದು ಹೇಳಿದರು. ಆದರೂ ಅವನು ದಾವೀದ ನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನೀನು ನಮ್ಮ ಪಟ್ಟಣದೊಳಗೆ ಬರಲು ಸಾಧ್ಯವೇ ಇಲ್ಲ” ಎಂದು ಹೇಳಿದರು. ಆದರೆ ದಾವೀದನು ಅವರನ್ನು ಸೋಲಿಸಿ ಚೀಯೋನ್ ಕೋಟೆಯನ್ನು ಗೆದ್ದುಕೊಂಡನು. ಅಂದಿನಿಂದ ಆ ಸ್ಥಳವು ದಾವೀದನ ನಗರವೆಂದು ಕರೆಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:5
26 ತಿಳಿವುಗಳ ಹೋಲಿಕೆ  

ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ಏಕೆಂದರೆ, ಯೆಹೋವ ದೇವರು ಚೀಯೋನನ್ನು ಆಯ್ದುಕೊಂಡು ಅದನ್ನು ತಮ್ಮ ವಾಸಕ್ಕಾಗಿ ಅಪೇಕ್ಷಿಸಿ ಹೀಗೆಂದಿದ್ದಾರೆ:


ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.


ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು.


ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.


ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.


ದಾವೀದನು ಕೋಟೆಯಲ್ಲಿ ವಾಸಮಾಡಿದನು. ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟರು.


ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.


“ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.


ದಾವೀದನು ಯೆಹೋವ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.


ದಾವೀದನು ಕೋಟೆಯಲ್ಲಿ ವಾಸಮಾಡಿದನು, ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವುದಕ್ಕೆ ಮನಸ್ಸಿಲ್ಲದೆ, ಎದ್ದು ತಡಿಕಟ್ಟಿದ ಎರಡು ಕತ್ತೆಗಳ ಮತ್ತು ತನ್ನ ಉಪಪತ್ನಿಯ ಸಂಗಡ ಹೊರಟುಹೋಗಿ, ಯೆರೂಸಲೇಮು ಎಂಬ ಯೆಬೂಸಿಗೆ ಸರಿಯಾಗಿ ಬಂದನು.


ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಹೋದರು.


“ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು