Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:20 - ಕನ್ನಡ ಸಮಕಾಲಿಕ ಅನುವಾದ

20 ದಾವೀದನು ಹಿಂದಿರುಗಿ ಚಿಕ್ಲಗಿಗೆ ಹಿಂದಿರುಗುತ್ತಿದ್ದಾಗ ಅವನೊಂದಿಗೆ ಮನಸ್ಸೆ ಗೋತ್ರದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು, ಚಿಲ್ಲೆತೈ ಎಂಬವರು ಬಂದು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಹಿಂತಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆ ಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು ಮತ್ತು ಚಿಲ್ಲೆತೈ ಎಂಬುವರು ಬಂದು ಅವನೊಂದಿಗೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೀಗೆ ಅವನು ಹಿಂದಿರುಗುತ್ತಿದ್ದಾಗ ಅವನನ್ನು ಸೇರಿಕೊಂಡ ಮನಸ್ಸೆಗೋತ್ರದ ಸೈನಿಕರ ಹೆಸರುಗಳು ಇಂತಿವೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಹಾಗೂ ಚಿಲ್ಲೆತೈ. ಇವರೆಲ್ಲರೂ ಮನಸ್ಸೆ ಗೋತ್ರದಲ್ಲಿ ಸಹಸ್ರಾಧಿಪತಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಹಿಂದಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ, ಚಿಲ್ಲೆತೈ ಎಂಬವರು ಬಂದು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದಾವೀದನು ಚಿಕ್ಲಗಿನಲ್ಲಿ ವಾಸವಾಗಿದ್ದಾಗ ಅವನೊಂದಿಗೆ ಸೇರಿದ ಮನಸ್ಸೆಕುಲದವರು ಯಾರೆಂದರೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಮತ್ತು ಚಿಲ್ಲತೈ. ಇವರೆಲ್ಲರೂ ಮನಸ್ಸೆಕುಲದ ಮುಖ್ಯಾಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:20
9 ತಿಳಿವುಗಳ ಹೋಲಿಕೆ  

ಹಾಗೆಯೇ ದಾವೀದನೂ, ಅವನು ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರುಗಿ ಹೋಗಲು ಮುಂಜಾನೆ ಎದ್ದರು. ಫಿಲಿಷ್ಟಿಯರು ಇಜ್ರೆಯೇಲ್ ಎಂಬ ಪಟ್ಟಣಕ್ಕೆ ಹೊರಟು ಹೋದರು.


ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಜ್ಞಾನಿಗಳನ್ನು ಕರೆಯಿಸಿ, ಒಂದೊಂದು ಗೋತ್ರದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದೆನು.


ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು.


ಎಲೀಯೆನೈ, ಚಿಲ್ಲೆತೈ, ಎಲೀಯೇಲ್,


ದಾವೀದನು ಸೌಲನ ಮೇಲೆ ಯುದ್ಧಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ, ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಕೊಡದೆ ಇದ್ದರು. ಏಕೆಂದರೆ ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ, “ಅವನು ನಮಗೆ ಮೋಸಮಾಡಿ, ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿದರೆ, ನಮ್ಮ ತಲೆಗಳು ಬಿದ್ದು ಹೋಗುವುವು,” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.


ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.


ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು