Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:8 - ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಮರುಭೂಮಿಯಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ, ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು. ಅವರ ಮುಖಗಳು ಸಿಂಹಗಳಂತೆ ಭೀಕರವಾಗಿದ್ದವು. ಪರ್ವತಗಳ ಮೇಲೆ ಇವರು ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾವೀದನು ಮರುಭೂಮಿಯ ಕೋಟೆಯಲ್ಲಿದ್ದಾಗ ಅವನ ಪಡೆಗಳಲ್ಲಿ ಬಂದು ಸೇರಿದ ಗಾದ್ ಗೋತ್ರದ ಪ್ರಸಿದ್ಧರೂ ಅನುಭವಶಾಲಿಗಳೂ ಆದ ಯುದ್ಧವೀರರ ಹೆಸರುಗಳು: ಇವರು ನೋಡಲು ಸಿಂಹಗಳಂತೆ ಭೀಕರರೂ ಪರ್ವತದ ಜಿಂಕೆಗಳಂತೆ ಚುರುಕಾದವರೂ ಗುರಾಣಿ, ಈಟಿಗಳನ್ನು ಉಪಯೋಗಿಸುವುದರಲ್ಲಿ ನಿಪುಣರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಣವೀರರೂ ಯುದ್ಧನಿಪುಣರೂ ಗುರಾಣಿಬರ್ಜಿಗಳಲ್ಲಿ ಪ್ರವೀಣರೂ ಸಿಂಹಮುಖರೂ ಬೆಟ್ಟದ ಜಿಂಕೆಯಂತೆ ಪಾದತ್ವರಿತರೂ ಆಗಿದ್ದು ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಕೂಡಿಕೊಂಡ ಗಾದ್ಯರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅರಣ್ಯದಲ್ಲಿದ್ದ ಕೋಟೆಯಲ್ಲಿ ಗಾದ್ ಕುಲದ ಕೆಲವರು ದಾವೀದನನ್ನು ಸೇರಿಕೊಂಡರು. ಇವರು ಯುದ್ಧದಲ್ಲಿ ನುರಿತ ಸೈನಿಕರಾಗಿದ್ದರು. ಈಟಿ ಬರ್ಜಿಗಳಲ್ಲಿ ಪರಿಣಿತರು; ಸಿಂಹಗಳಂತೆ ಕ್ರೂರಿಗಳು; ಬೆಟ್ಟದ ಮೇಲೆ ಜಿಂಕೆಯ ತರಹ ವೇಗವಾಗಿ ಓಡಬಲ್ಲವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:8
17 ತಿಳಿವುಗಳ ಹೋಲಿಕೆ  

ಚೆರೂಯಳ ಮೂವರು ಮಕ್ಕಳಾದ ಯೋವಾಬನೂ, ಅಬೀಷೈಯನೂ, ಅಸಾಯೇಲನೂ ಅಲ್ಲಿ ಇದ್ದರು. ಅಸಾಯೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.


ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.


ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು.


ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ.


ನನ್ನ ಪ್ರಿಯನೇ, ಸುಗಂಧ ಸಸ್ಯ ಪರ್ವತಗಳ ಮೇಲಿರುವ ಜಿಂಕೆಯಂತೆಯೂ, ಪ್ರಾಯದ ಹುಲ್ಲೆಯಂತೆಯೂ ನೀನು ಬೇಗ ಬಾ.


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ಬೇಟೆಗಾರನ ಕೈಯಿಂದ ಜಿಂಕೆಯೂ, ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ.


ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.


ಬೆನ್ಯಾಮೀನನ ಮತ್ತು ಯೆಹೂದ್ಯರಲ್ಲಿ ಕೆಲವರು ಕೋಟೆಯ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.


ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು; ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.


ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.


ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ, ಸಂತೋಷಕರವಾಗಿಯೂ ಇದ್ದರು. ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ, ಸಿಂಹಗಳಿಗಿಂತ ಬಲವುಳ್ಳವರೂ ಆಗಿದ್ದರು.


ಹಾಗೆಯೇ ದಾವೀದನು ಸೌಲನಿಗೆ ಪ್ರಮಾಣ ಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಮನುಷ್ಯರೂ ಆಶ್ರಯಗಿರಿಗೆ ಏರಿಹೋದರು.


ದಾವೀದನು ಆ ಸ್ಥಳವನ್ನು ಬಿಟ್ಟು ಹೋಗಿ ಏನ್ಗೆದಿಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.


ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.


ಗೆದೋರಿನಲ್ಲಿರುವ ಯೆರೋಹಾಮನ ಪುತ್ರರಾದ ಯೋಯೇಲಹ, ಜೆಬದ್ಯ.


ಅಧಿಕಾರದಲ್ಲಿ ಏಜೆರ್ ಮುಖ್ಯಸ್ಥನು; ಎರಡನೆಯವನು ಓಬದ್ಯ; ಮೂರನೆಯವನು ಎಲೀಯಾಬ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು