Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:3 - ಕನ್ನಡ ಸಮಕಾಲಿಕ ಅನುವಾದ

3 ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ನಮ್ಮ ಬಳಿಗೆ ಕೂಡಿಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ ನಮ್ಮ ದೇವಮಂಜೂಷವನ್ನು ತೆಗೆದುಕೊಂಡು ಬರೋಣ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿವಹಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:3
11 ತಿಳಿವುಗಳ ಹೋಲಿಕೆ  

ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು.


ನಾನು ಅವನಿಗೋಸ್ಕರ ದೇವರನ್ನು ಕೇಳಿಕೊಂಡದ್ದು ಅದೇ ಮೊದಲನೆಯದೋ? ಅಲ್ಲವೇ ಅಲ್ಲ. ಅರಸನು ತನ್ನ ಸೇವಕನ ಮೇಲಾದರೂ ಇಲ್ಲವೆ ಅವನ ಕುಟುಂಬದವರ ಮೇಲಾದರೂ ಇಂಥ ಅಪವಾದವನ್ನು ಹೊರಿಸಬಾರದು, ಏಕೆಂದರೆ ಆ ಕಾರ್ಯದ ಬಗ್ಗೆ ನಮಗೇನೂ ತಿಳಿದಿಲ್ಲ,” ಎಂದನು.


ಇವನು ಅವನಿಗೋಸ್ಕರ ಯೆಹೋವ ದೇವರನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು, ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಅವನಿಗೆ ಕೊಟ್ಟನು,” ಎಂದನು.


ಸೌಲನು ಜನರಿಗೆ, “ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿ ಹೋಗಿ, ಉದಯಕಾಲದವರೆಗೆ ಅವರನ್ನು ಸುಲಿದುಕೊಂಡು, ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು,” ಎಂದನು. ಅದಕ್ಕೆ ಜನರು, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ಮಾಡು,” ಎಂದರು. ಆಗ ಯಾಜಕನು, “ದೇವರ ಸನ್ನಿಧಿಗೆ ಹೋಗೋಣ,” ಎಂದನು.


ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು.


ನಾವು ಎಫ್ರಾತದಲ್ಲಿ ಇದನ್ನು ಕೇಳಿದೆವು; ಯಹಾರ್ ಅಡವಿಯ ಬಯಲುಗಳಲ್ಲಿ ಇದನ್ನು ಕಂಡು ಹೀಗೆಂದು ಕೇಳಿಸಿಕೊಂಡೆವು:


ದಾವೀದನು ಇಸ್ರಾಯೇಲಿನ ಸಮಸ್ತ ಜನರಿಗೆ, “ನಿಮಗೆ ಒಳ್ಳೆಯದಾಗಿ ಕಂಡರೆ, ನಮ್ಮ ದೇವರಾದ ಯೆಹೋವ ದೇವರ ಚಿತ್ತವಾದರೆ, ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲದರಲ್ಲಿ ಉಳಿದಿರುವ ನಮ್ಮ ಸಹೋದರರನ್ನೂ, ತಮ್ಮ ಪಟ್ಟಣಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕರನ್ನೂ, ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೆಯಕಳುಹಿಸಿ,


ಹಾಗೆಯೇ ಮಾಡೋಣ ಎಂದು ಕೂಟದವರೆಲ್ಲರೂ ಹೇಳಿದರು. ಏಕೆಂದರೆ ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.


ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು