Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:8 - ಕನ್ನಡ ಸಮಕಾಲಿಕ ಅನುವಾದ

8 ಆಗ ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ದೇವರ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತೂರಿ ಇವುಗಳ ಧ್ವನಿಯೊಡನೆ ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ದೇವರ ಮುಂದೆ ನರ್ತನ ಮಾಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:8
18 ತಿಳಿವುಗಳ ಹೋಲಿಕೆ  

ವೀಣೆಯ ಸ್ವರಕ್ಕೆ ಹಾಡುತ್ತೀರಿ, ದಾವೀದನ ಹಾಗೆ ನಿಮಗೆ ನೀವೇ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತೀರಿ.


ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.


ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.


ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”


ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.


ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.


ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.


ಆದರೆ ಈಗ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬಾ,” ಎಂದನು. ಆ ವಾದ್ಯ ಬಾರಿಸುವವನು ಬಾರಿಸಿದಾಗ, ಯೆಹೋವ ದೇವರ ಕೈ ಎಲೀಷನ ಮೇಲೆ ಬಂತು.


“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು.


ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು