Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:15 - ಕನ್ನಡ ಸಮಕಾಲಿಕ ಅನುವಾದ

15 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸಪ್ಪಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:15
16 ತಿಳಿವುಗಳ ಹೋಲಿಕೆ  

ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.


ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ.


ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.


ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.


ಗಿದ್ಯೋನನು ಆ ಕನಸಿನ ವಿವರವನ್ನೂ, ಅದರ ಅರ್ಥವನ್ನೂ ಕೇಳಿದಾಗ, ಅವನು ಯೆಹೋವ ದೇವರನ್ನು ಆರಾಧಿಸಿ, ಇಸ್ರಾಯೇಲ್ ಪಾಳೆಗೆ ತಿರುಗಿಬಂದು, “ಏಳಿರಿ, ಯೆಹೋವ ದೇವರು ಮಿದ್ಯಾನ್ಯರ ಪಾಳೆಯನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದು ಹೇಳಿದನು.


ಆಗ ರಾತ್ರಿಯಲ್ಲಿ, ಯೆಹೋವ ದೇವರು ಅವನಿಗೆ, “ನೀನು ಎದ್ದು ಪಾಳೆಗೆ ವಿರೋಧವಾಗಿ ಇಳಿದು ಹೋಗು. ಏಕೆಂದರೆ ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಆಗ ದೆಬೋರಳು ಬಾರಾಕನಿಗೆ, “ನೀನು ಏಳು. ಏಕೆಂದರೆ ಯೆಹೋವ ದೇವರು ಸೀಸೆರನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವ ದಿನವು ಇದೇ. ಯೆಹೋವ ದೇವರು ನಿನ್ನ ಮುಂದೆ ಹೊರಡಲಿಲ್ಲವೋ?” ಎಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು, ತಾಬೋರ್ ಬೆಟ್ಟದಿಂದ ಇಳಿದನು.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.


ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.


ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು.


ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು