Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:13 - ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದ್ದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:13
13 ತಿಳಿವುಗಳ ಹೋಲಿಕೆ  

ಆಗ ಅವರು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.


ಆದರೆ ಎಲ್ಲವನ್ನೂ ಯೋಗ್ಯವಾಗಿಯೂ ಕ್ರಮವಾಗಿಯೂ ಮಾಡಿರಿ.


ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.


ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.


ಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು.


“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.


ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು