Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:3 - ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರನ್ನು ಯೆರೂಸಲೇವಿುಗೆ ಕರಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:3
13 ತಿಳಿವುಗಳ ಹೋಲಿಕೆ  

ಹೀಗೆ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತರುವುದಕ್ಕೆ ದಾವೀದನು ಈಜಿಪ್ಟಿನ ಶೀಹೋರ್ ನದಿ ಮೊದಲ್ಗೊಂಡು ಲಿಬೋ ಹಮಾತಿನ ಪ್ರದೇಶದವರೆಗೆ ಇರುವ ಸಮಸ್ತ ಇಸ್ರಾಯೇಲರನ್ನು ಕೂಡಿಸಿದನು.


ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.


ದಾವೀದನ ಪಟ್ಟಣಗಳಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿಕೊಂಡು, ದೇವರ ಮಂಜೂಷಕ್ಕೋಸ್ಕರ ಸ್ಥಳಗಳನ್ನು ಸಿದ್ಧಮಾಡಿ, ಅದರ ನಿಮಿತ್ತ ಗುಡಾರ ಹಾಕಿದನು.


“ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.


“ನೀವು ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ್ದರಿಂದ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ನಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ, ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.


ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು.


ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.


ಅವರು ಮೋಶೆಯು ಆಜ್ಞಾಪಿಸಿದವುಗಳನ್ನು ದೇವದರ್ಶನದ ಗುಡಾರದ ಮುಂದೆ ತಂದರು. ಸಮೂಹವೆಲ್ಲವೂ ಹತ್ತಿರ ಬಂದು ಯೆಹೋವ ದೇವರ ಮುಂದೆ ನಿಂತಿತು.


ದಾವೀದನು ಇಸ್ರಾಯೇಲಿನ ಸಮಸ್ತ ಜನರಿಗೆ, “ನಿಮಗೆ ಒಳ್ಳೆಯದಾಗಿ ಕಂಡರೆ, ನಮ್ಮ ದೇವರಾದ ಯೆಹೋವ ದೇವರ ಚಿತ್ತವಾದರೆ, ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲದರಲ್ಲಿ ಉಳಿದಿರುವ ನಮ್ಮ ಸಹೋದರರನ್ನೂ, ತಮ್ಮ ಪಟ್ಟಣಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕರನ್ನೂ, ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೆಯಕಳುಹಿಸಿ,


ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.


ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಪ್ರಧಾನರಾದವರೊಂದಿಗೂ, ಸಮಸ್ತ ಇಸ್ರಾಯೇಲರ ಪಿತೃಗಳ ಶ್ರೇಷ್ಠರಾದ ಸಮಸ್ತ ಪ್ರಭುಗಳೊಂದಿಗೂ ಮಾತನಾಡಿದನು.


ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.


ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು