Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:1 - ಕನ್ನಡ ಸಮಕಾಲಿಕ ಅನುವಾದ

1 ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:1
14 ತಿಳಿವುಗಳ ಹೋಲಿಕೆ  

ದಾವೀದನ ಪಟ್ಟಣಗಳಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿಕೊಂಡು, ದೇವರ ಮಂಜೂಷಕ್ಕೋಸ್ಕರ ಸ್ಥಳಗಳನ್ನು ಸಿದ್ಧಮಾಡಿ, ಅದರ ನಿಮಿತ್ತ ಗುಡಾರ ಹಾಕಿದನು.


ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.


“ನೀವು ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ್ದರಿಂದ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ನಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ, ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.


‘ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ.


ಸಮಾಧಾನದ ಬಲಿಗಾಗಿ ಅದರ ಇಡೀ ಹಿಂಭಾಗವನ್ನೂ, ಅದರ ಕೊಬ್ಬನ್ನೂ, ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,


ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಅವನು ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ,


ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು.


ಆಗ ಅರಸನೂ, ಅವನ ಸಂಗಡ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.


ಲೇವಿಯ ಪುತ್ರರು: ಗೇರ್ಷೋಮ್, ಕೊಹಾತ್, ಮೆರಾರೀ ಎಂಬುವರು.


ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು