37 ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು.
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.