Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:11 - ಕನ್ನಡ ಸಮಕಾಲಿಕ ಅನುವಾದ

11 ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:11
21 ತಿಳಿವುಗಳ ಹೋಲಿಕೆ  

ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


“ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.


ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು.


ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.


ಯೆಹೋವ ದೇವರು ನನಗೆ ಅನೇಕ ಪುತ್ರರನ್ನು ಕೊಟ್ಟಿರುವಾಗ, ನನ್ನ ಸಮಸ್ತ ಪುತ್ರರಲ್ಲಿ ಇಸ್ರಾಯೇಲಿನ ಮೇಲಿಗಾಗಿ, ಯೆಹೋವ ದೇವರ ರಾಜ್ಯದ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೆ ನನ್ನ ಮಗ ಸೊಲೊಮೋನನನ್ನು ಆದುಕೊಂಡರು.


“ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಯೆಹೋವ ದೇವರು ಮಾತುಕೊಟ್ಟ ಪ್ರಕಾರ, ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ.


ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.


ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದೆ. ಆ ದಿವಸದಿಂದ ಈಚೆಗೆ, ದುಷ್ಟರು ಇನ್ನು ಮೇಲೆ ಇಸ್ರಾಯೇಲರನ್ನು ಕುಗ್ಗಿಸದೆ ಇರುವರು. ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. “ ‘ಯೆಹೋವ ದೇವರಾದ ನಾನು ನಿನಗೆ ಮನೆಯನ್ನು ಕಟ್ಟುವೆನು, ಎಂದು ನಿನಗೆ ತಿಳಿಸುತ್ತೇನೆ.


ಅವನೇ ನನಗೆ ದೇವಾಲಯವನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.


ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು