Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:2 - ಕನ್ನಡ ಸಮಕಾಲಿಕ ಅನುವಾದ

2 ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಂದು ದಿನ ಅವನು ಪ್ರವಾದಿ ನಾತಾನನನ್ನು ಬರಮಾಡಿ, “ನೋಡು, ನಾನು ವಾಸಮಾಡುತ್ತಾ ಇರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ಸರ್ವೇಶ್ವರನ ನಿಬಂಧನ ಮಂಜೂಷವಿರುವುದು ಬಟ್ಟೆಯಿಂದ ಮಾಡಿದ ಗುಡಾರದಲ್ಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾತಾನನು ದಾವೀದನಿಗೆ - ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದಕ್ಕೆ ನಾತಾನನು, “ನಿನ್ನ ಮನಸ್ಸಿಗೆ ಬಂದಂತೆ ಮಾಡು. ದೇವರು ನಿನ್ನೊಂದಿಗಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:2
13 ತಿಳಿವುಗಳ ಹೋಲಿಕೆ  

ನಾವು ಅಪೂರ್ಣವಾಗಿ ತಿಳಿದುಕೊಂಡಿದ್ದೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.


ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.


ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು.


ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.


ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.


ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು.


ಆಗ ಇಸ್ರಾಯೇಲರು ಅವರ ಆಹಾರದಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಅವರು ಯೆಹೋವ ದೇವರಿಂದ ಆಲೋಚನೆಯನ್ನು ಕೇಳಲಿಲ್ಲ.


“ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,


ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.


ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು