Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:11 - ಕನ್ನಡ ಸಮಕಾಲಿಕ ಅನುವಾದ

11 ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು ಮೋವಾಬ್ಯರು ಅಮ್ಮೋನಿಯರು ಫಿಲಿಷ್ಟಿಯರು ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:11
20 ತಿಳಿವುಗಳ ಹೋಲಿಕೆ  

ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


ಹೀಗೆಯೇ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ದೇವರ ಆಲಯದ ಭಂಡಾರಕ್ಕೆ ಸೇರಿಸಿದನು.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು.


“ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.


ಆಗ ಯೆಹೂದದ ಅರಸನಾದ ಯೋವಾಷನು ತನ್ನ ಪೂರ್ವಜರಾದ ಯೆಹೋಷಾಫಾಟ, ಯೆಹೋರಾಮ್, ಅಹಜ್ಯ ಎಂಬ ಯೆಹೂದದ ಅರಸರು ಅರ್ಪಿಸಿದ ಸಮಸ್ತ ಪ್ರತಿಷ್ಠಿತವಾದವುಗಳನ್ನೂ ತಾನೇ ಸ್ವತಃ ಅರ್ಪಿಸಿದ ಪ್ರತಿಷ್ಠಿತವಾದವುಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸದಲ್ಲಿಯೂ, ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತೆಗೆದುಕೊಂಡು ಅರಾಮಿನ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.


ಹೀಗೆಯೇ ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.


ಇದಲ್ಲದೆ ದಾವೀದನು ಶತ್ರುಗಳ ಸಮಸ್ತ ದನಕುರಿಗಳ ಮಂದೆಗಳನ್ನು ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ಪಶುಗಳ ಮುಂದಾಗಿ ಹೊಡೆದುಕೊಂಡು ಬಂದರು.


ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.


ಎಲ್ಲಾ ಬೆಳ್ಳಿಬಂಗಾರ, ಕಂಚು, ಕಬ್ಬಿಣ ಪಾತ್ರೆಗಳು ಯೆಹೋವ ದೇವರಿಗೆ ಅರ್ಪಿತವಾಗಿರಬೇಕು. ಅವು ಯೆಹೋವ ದೇವರ ಭಂಡಾರಕ್ಕೆ ಸೇರಿರಬೇಕು,” ಎಂದು ಆಜ್ಞಾಪಿಸಿದನು.


ನಿಮ್ಮಲ್ಲಿರುವದರಿಂದ ಯೆಹೋವ ದೇವರಿಗೆ ಕಾಣಿಕೆಯನ್ನು ಅರ್ಪಿಸಿರಿ. ಯಾರ‍್ಯಾರಿಗೆ ಇಷ್ಟವಿದೆಯೋ ಅವರು, “ಚಿನ್ನ, ಬೆಳ್ಳಿ, ಕಂಚು,


ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.


ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.


ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು