Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:12 - ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:12
23 ತಿಳಿವುಗಳ ಹೋಲಿಕೆ  

ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.


ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.


ಆದರೆ ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,


ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.


ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು. ಚೆರೂಯಳ ಮೂವರು ಮಕ್ಕಳು ಅಬೀಷೈ, ಯೋವಾಬ್, ಅಸಾಯೇಲ್.


ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.


ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಸೋಲಿಸಿ, ಯುದ್ಧದಲ್ಲಿ ಸೆಲ ದುರ್ಗವನ್ನು ವಶಪಡಿಸಿಕೊಂಡು, ಅದಕ್ಕೆ ಯೊಕ್ತೆಯೇಲ್ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.


ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.


ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.


ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.


ಅವನೇ ನನ್ನ ಹೆಸರಿಗಾಗಿ ದೇವಾಲಯನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.


ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.


ಆಗ ಅಬೀಷೈಯನು ದಾವೀದನಿಗೆ, “ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಿಂದ ನೆಲಕ್ಕೆ ಹತ್ತುವಂತೆ ತಿವಿಯಲು ಅಪ್ಪಣೆಕೊಡಬೇಕು; ಎರಡು ಸಾರಿ ಹೊಡೆಯುವುದಿಲ್ಲ,” ಎಂದನು.


ದಾವೀದನು ಎದೋಮಿನಲ್ಲಿರುವಾಗ ಸೇನಾಧಿಪತಿಯಾದ ಯೋವಾಬನು ಎದೋಮಿನ ಗಂಡಸರೆಲ್ಲರನ್ನು ಕೊಂದುಹಾಕಿದನು. ತರುವಾಯ ಇಸ್ರಾಯೇಲರಲ್ಲಿ ಹತರಾದವರನ್ನು ಸಮಾಧಿಮಾಡಲು ಹೋದನು.


ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.


ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು