Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:13 - ಕನ್ನಡ ಸಮಕಾಲಿಕ ಅನುವಾದ

13 ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದಾವೀದನು ಎದೋವಿುನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:13
19 ತಿಳಿವುಗಳ ಹೋಲಿಕೆ  

ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು.


ದಮಸ್ಕದ ಅರಸನಾದ ಅರೇತನ ಆಜ್ಞೆಯ ಪ್ರಕಾರ, ಅಲ್ಲಿಯ ರಾಜ್ಯಪಾಲನು ನನ್ನನ್ನು ಹಿಡಿದು ಬಂಧಿಸಬೇಕೆಂದು ದಮಸ್ಕದ ಪಟ್ಟಣವನ್ನು ಕಾವಲಿರಿಸಿದನು.


ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.


ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು, ನಿಮ್ಮ ಪ್ರಾಣವನ್ನೂ ಕಾಪಾಡುವರು.


ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.


ಆ ಕಾಲದಲ್ಲಿ, ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಯುವಕನಿಗೆ, “ನಾವು ನಮಗೆದುರಾಗಿರುವ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ,” ಎಂದನು. ಆದರೆ ತಂದೆಗೆ ತಿಳಿಸಲಿಲ್ಲ.


ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.


“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,


ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”


ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”


ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.”


ದಾವೀದನು ಎದೋಮಿನಲ್ಲಿರುವಾಗ ಸೇನಾಧಿಪತಿಯಾದ ಯೋವಾಬನು ಎದೋಮಿನ ಗಂಡಸರೆಲ್ಲರನ್ನು ಕೊಂದುಹಾಕಿದನು. ತರುವಾಯ ಇಸ್ರಾಯೇಲರಲ್ಲಿ ಹತರಾದವರನ್ನು ಸಮಾಧಿಮಾಡಲು ಹೋದನು.


ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.


ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು