Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:3 - ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:3
11 ತಿಳಿವುಗಳ ಹೋಲಿಕೆ  

ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.


ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.


ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ಸೊಲೊಮೋನನು ಹಮಾತ್ ಚೋಬವನ್ನು ವಶಪಡಿಸಿಕೊಂಡನು.


ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು