Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿನ ಪ್ರಭುಗಳು ಹಾನೂನನಿಗೆ - ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಅಮ್ಮೋನಿಯರ ನಾಯಕರು ಹಾನೂನನಿಗೆ, “ಮೋಸ ಹೋಗಬೇಡ, ದಾವೀದನು ನಿನ್ನ ತಂದೆಯನ್ನು ಗೌರವಿಸಿ ನಿನ್ನನ್ನು ಸಂತೈಸಲು ಸೇವಕರನ್ನು ಕಳುಹಿಸಿದನೆಂದು ಭಾವಿಸಿಕೊಂಡಿರುವೆಯಾ? ಇಲ್ಲ, ಅವನು ನಿನ್ನ ರಾಜ್ಯದಲ್ಲಿ ಹೊಂಚುಹಾಕಲೂ ವಿಷಯಗಳನ್ನು ಸಂಗ್ರಹಿಸಲೂ ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:3
12 ತಿಳಿವುಗಳ ಹೋಲಿಕೆ  

ಆಕೀಷನು ದಾವೀದನಿಗೆ ಉತ್ತರವಾಗಿ, “ನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ, ‘ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದು,’ ಎಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.


ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?


ದಾನರು ದೇಶವನ್ನು ಸಂಚರಿಸಿ ನೋಡಿ, ಪರಿಶೋಧಿಸುವುದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ, ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿಯನ್ನು ಕರೆದು, ಅವರ ಸಂಗಡ, “ನೀವು ಹೋಗಿ ದೇಶವನ್ನು ಸಂಚರಿಸಿ ನೋಡಿರಿ,” ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದು ಅಲ್ಲಿ ಇಳಿದುಕೊಂಡರು.


ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.


ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು.


ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು