Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:7 - ಕನ್ನಡ ಸಮಕಾಲಿಕ ಅನುವಾದ

7 ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ, ಮಾಕದ ಅರಸನನ್ನೂ, ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಊರಿನ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋನಿಯರು ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಅವರ ಸಹಾಯಕ್ಕಾಗಿ ಮೆದಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೀಗೆ ಅಮ್ಮೋನಿಯರು ಮೂವತ್ತೆರಡು ಸಾವಿರ ರಥಗಳಿಂದ ಯುದ್ಧಕ್ಕೆ ಸಜ್ಜಾದರು. ಅಲ್ಲದೆ ಮಾಕಾದ ಅರಸನಿಗೆ ಹಣವನ್ನು ಕೊಟ್ಟು ಅವನ ಸೈನ್ಯವನ್ನೂ ತಮ್ಮ ಸಹಾಯಕ್ಕೆ ಬರಮಾಡಿದರು. ಮಾಕದ ಅರಸನೂ ಅವನ ಸೈನಿಕರೂ ಬಂದು ಮೇದೆಬ ಪಟ್ಟಣದ ಬಳಿ ಪಾಳೆಯ ಮಾಡಿಕೊಂಡರು. ಇತ್ತ ಅಮ್ಮೋನಿಯರೂ ಯುದ್ಧಸನ್ನದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:7
12 ತಿಳಿವುಗಳ ಹೋಲಿಕೆ  

ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ


“ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮೊದಲುಗೊಂಡು, ಮೇದೆಬಾದ ಬಳಿಯಲ್ಲಿರುವ ಸಕಲ ಸಮನಾದ ಭೂಮಿಯೂ,


ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.


ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.


ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.


ಈಜಿಪ್ಟಿನವರು ಅವರನ್ನು ಹಿಂದಟ್ಟಿದರು. ಅವರು ಸಮುದ್ರ ತೀರದಲ್ಲಿ ಇಳಿದುಕೊಂಡಿರುವಾಗ, ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸಮೀಪದಲ್ಲಿ ಬಾಲ್ಜೆಫೋನಿನ ಎದುರಾಗಿ ಇಸ್ರಾಯೇಲರನ್ನು ಸಮೀಪಿಸಿದರು.


ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು