Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:17 - ಕನ್ನಡ ಸಮಕಾಲಿಕ ಅನುವಾದ

17 ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನ ಇನ್ನೊಬ್ಬ ಮಗಳು ಅಬೀಗೈಲಳು ಇಷ್ಮಾಯೇಲನ ವಂಶಜ ಯೆತೆರ್ ಎಂಬವನನ್ನು ವಿವಾಹವಾಗಿ ಅಮಾಸ ಎಂಬ ಮಗನನ್ನು ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಬೀಗೈಲಳು ಅಮಾಸನ ತಾಯಿ; ಇಷ್ಮಾಯೇಲ್ಯನಾದ ಯೆತೆರ್ ಎಂಬವನು ಅವನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಬೀಗೈಲಳು ಅಮಾಸನ ತಾಯಿ. ಅಮಾಸನ ತಂದೆ ಯೆತೆರ್, ಇವನು ಇಷ್ಮಾಯೇಲ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:17
8 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು.


ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.


“ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.


ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.


ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು. ಚೆರೂಯಳ ಮೂವರು ಮಕ್ಕಳು ಅಬೀಷೈ, ಯೋವಾಬ್, ಅಸಾಯೇಲ್.


ಹೆಚ್ರೋನನ ಮಗನಾದ ಕಾಲೇಬನು ಅಜೂಬಳಿಂದಲೂ ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಇವಳ ಪುತ್ರರು: ಯೇಷೆರನು, ಶೋಬಾಬನು, ಅರ್ದೋನನು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು