Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:7 - ಕನ್ನಡ ಸಮಕಾಲಿಕ ಅನುವಾದ

7 ಕರ್ಮೀಯ ಪುತ್ರರು: ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲರನ್ನು ಆಪತ್ತಿಗೆ ಗುರಿಪಡಿಸಿದ ಆಕಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರಹನ ಸಂತತಿಯಲ್ಲಿ ಕರ್ಮಿಯ ಮಗ ಆಕಾರನು ಸರ್ವೇಶ್ವರನಿಗೆ ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡದ್ದರಿಂದ ಇಸ್ರಯೇಲರಿಗೆ ಆಪತ್ತನ್ನು ತಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯಿಂದ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 (ಕರ್ಮೀಯು ಜಿಮ್ರಿಯ ಮಗನು.) ಜಿಮ್ರಿಯು ಆಕಾನನ ಮಗನು. ಈ ಆಕಾನನು ಯುದ್ಧದಲ್ಲಿ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರೇಲರಿಗೆ ದೊಡ್ಡ ಆಪತ್ತನ್ನು ತಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:7
10 ತಿಳಿವುಗಳ ಹೋಲಿಕೆ  

ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.


ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು.


ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,


ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.


ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು.


ಜೆರಹನ ಪುತ್ರರು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ, ಒಟ್ಟು ಐದು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು