Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 20:1 - ಕನ್ನಡ ಸಮಕಾಲಿಕ ಅನುವಾದ

1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ, ಯೋವಾಬನು ಬಲವಾದ ಸೈನ್ಯವನ್ನು ಕರೆದುಕೊಂಡು ಹೋಗಿ, ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ, ರಬ್ಬ ನಗರಕ್ಕೆ ಮುತ್ತಿಗೆಹಾಕಿದನು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣದ ಮೇಲೆ ದಾಳಿಮಾಡಿ, ಅದನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ನಡಿಸಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಹೋಗಿ ಅದಕ್ಕೆ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಹಾಳುಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ವಸಂತಕಾಲದಲ್ಲಿ ರಾಜರುಗಳು ಯುದ್ಧಕ್ಕೆ ಹೊರಡುವ ಸಮಯ. ಯೋವಾಬನೂ ತನ್ನ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟನು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಇಸ್ರೇಲಿನ ಸೈನ್ಯವು ಅಮ್ಮೋನ್ ದೇಶದೊಳಗೆ ನುಗ್ಗಿ ಅದನ್ನು ನಾಶಮಾಡಿದರು. ಆಮೇಲೆ ರಬ್ಬ ಪಟ್ಟಣಕ್ಕೆ ಮುತ್ತಿಗೆಹಾಕಿ ಸಂಪೂರ್ಣವಾಗಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 20:1
15 ತಿಳಿವುಗಳ ಹೋಲಿಕೆ  

ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.


ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.


ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.


“ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಅನಂತರ ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ವರ್ಷದ ಆರಂಭದಲ್ಲಿ ಮೋವಾಬ್ಯರ ದಂಡುಗಳು ದೇಶದಲ್ಲಿ ಪ್ರವೇಶಿಸಿದವು.


ವಸಂತ ಕಾಲದಲ್ಲಿ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ, ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಅಫೇಕಿಗೆ ಹೋದನು.


ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು.


ದಾವೀದನು ಮಹನಯಿಮಿಗೆ ಬಂದಾಗ, ಅಮ್ಮೋನಿಯರ ರಬ್ಬಾ ಪಟ್ಟಣದ ನಾಹಾಷನ ಮಗ ಶೋಬಿಯೂ, ಲೋದೆಬಾರು ಊರಿನವನಾಗಿರುವ ಅಮ್ಮಿಯೇಲನ ಮಗ ಮಾಕೀರನೂ, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈಯೂ


ಹದದೆಜೆರನ ಅಧೀನ ರಾಜರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ದಾವೀದನ ಸಂಗಡ ಸಂಧಾನ ಮಾಡಿಕೊಂಡು, ಅವನಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು