Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:1 - ಕನ್ನಡ ಸಮಕಾಲಿಕ ಅನುವಾದ

1 ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೈತಾನನು ಇಸ್ರಯೇಲರಿಗೆ ವಿರೋಧವಾಗಿ ಎದ್ದು ಇಸ್ರಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೈತಾನನು ಇಸ್ರಾಯೇಲ್ಯರಿಗೆ ವಿರೋಧವಾಗಿ ಎದ್ದು ಖಾನೇಷುಮಾರಿಮಾಡುವದಕ್ಕೆ ದಾವೀದನನ್ನು ಪ್ರೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:1
18 ತಿಳಿವುಗಳ ಹೋಲಿಕೆ  

ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.


ಇನ್ನೊಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿ ಬಂದಿದ್ದರು. ಸೈತಾನನು ಸಹ ಅವರೊಂದಿಗೆ ಯೆಹೋವ ದೇವರ ಮುಂದೆ ಬಂದನು.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ.


ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.


“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.


ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,


ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.


ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.


ಇವರು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.


ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ.


“ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.


ಇವರೆಲ್ಲರು ಆಶೇರನ ಮಕ್ಕಳಾಗಿದ್ದು, ತಮ್ಮ ತಂದೆಯ ಕುಟುಂಬದಲ್ಲಿ ಯಜಮಾನರಾಗಿಯೂ, ಯುದ್ಧ ಪರಾಕ್ರಮಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ, ಪ್ರಭುಗಳಲ್ಲಿ ಶ್ರೇಷ್ಠರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ದಾಖಲಿಸಿದ ಲೆಕ್ಕದ ಪ್ರಕಾರ ಯುದ್ಧಕ್ಕೆ ಸಿದ್ಧವಿರುವ 26,000 ಮಂದಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು