Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:22 - ಕನ್ನಡ ಸಮಕಾಲಿಕ ಅನುವಾದ

22 ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪೂರ್ಣ ಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದಾವೀದನು ಅವನಿಗೆ - ನಿನ್ನ ಕಣವನ್ನೂ ಭೂವಿುಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟಿಸುತ್ತೇನೆ; ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದಾವೀದನು ಒರ್ನಾನನಿಗೆ, “ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಈ ಭಯಂಕರ ವ್ಯಾಧಿಯು ನಿಂತುಹೋಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:22
8 ತಿಳಿವುಗಳ ಹೋಲಿಕೆ  

ಅಹಾಬನು ನಾಬೋತನಿಗೆ, “ತೋಟವು ನನ್ನ ಮನೆಯ ಬಳಿಯಲ್ಲಿ ಇರುವುದರಿಂದ ಅದು ನನಗೆ ಕಾಯಿಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು. ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೆಯ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ಇಲ್ಲವೆ ನಿನ್ನ ದೃಷ್ಟಿಗೆ ಒಳ್ಳೆಯದಾಗಿದ್ದರೆ, ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು,” ಎಂದನು.


ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.


ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.


ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡದ್ದರಿಂದ ವ್ಯಾಧಿಯು ಶಮನವಾಯಿತು.


ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.


ಆದರೆ ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡನು, ಆಗ ಅವನು ಕಣದಿಂದ ಹೊರಟು, ದಾವೀದನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.


ಒರ್ನಾನನು ದಾವೀದನಿಗೆ, “ನಿನಗಾಗಿ ತೆಗೆದುಕೋ, ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ, ಧಾನ್ಯ ಸಮರ್ಪಣೆಗೋಸ್ಕರ ಗೋಧಿ ಕೊಡುವುದಲ್ಲದೆ, ಸಮಸ್ತವನ್ನೂ ಕೊಡುವೆನು,” ಎಂದನು.


ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು