Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಸರ್ವೇಶ್ವರ ನನಗೆ, “ನೀನು ಬಹಳ ರಕ್ತವನ್ನು ಸುರಿಸಿದವನು; ಮಹಾಯುದ್ಧಗಳನ್ನು ನಡೆಸಿದವನು. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ, ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಯೆಹೋವನು ನನಗೆ - ನೀನು ಬಹಳ ರಕ್ತವನ್ನು ಸುರಿಸಿದವನೂ ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಯೆಹೋವನು ನನಗೆ, ‘ದಾವೀದನೇ, ನೀನು ಅನೇಕ ಯುದ್ಧಗಳನ್ನು ಮಾಡಿ ಅನೇಕರನ್ನು ಕೊಂದಿರುತ್ತೀ. ಹೀಗಿರುವದರಿಂದ ನೀನು ನನಗೆ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:8
9 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, ‘ನೀನು ಮಹಾ ಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.


“ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು.


ಏಳನೆಯ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗಬೇಕು. ತರುವಾಯ ಪಾಳೆಯದೊಳಗೆ ಬರಬೇಕು,” ಎಂದು ಹೇಳಿದನು.


ಎಲ್ಲಾ ಬಟ್ಟೆಗಳನ್ನೂ, ಎಲ್ಲಾ ಚರ್ಮದ ಸಲಕರಣೆಗಳನ್ನೂ, ಮೇಕೆ ಕೂದಲಿಂದ ಮಾಡಿದ್ದೆಲ್ಲವನ್ನೂ, ಕಟ್ಟಿಗೆ ಸಲಕರಣೆಗಳೆಲ್ಲವನ್ನೂ ಶುದ್ಧಮಾಡಬೇಕು,” ಎಂದು ಹೇಳಿದನು.


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ.


ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು