Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:5 - ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಧಿಕಾರಿಗಳನ್ನಾಗಿ ಆರು ಸಾವಿರ ಮಂದಿಯನ್ನೂ ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಮಂದಿಯನ್ನೂ ತಾನು ಸಿದ್ಧಮಾಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವದಕ್ಕಾಗಿ ನಾಲ್ಕು ಸಾವಿರ ಮಂದಿಯನ್ನೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:5
23 ತಿಳಿವುಗಳ ಹೋಲಿಕೆ  

ವೀಣೆಯ ಸ್ವರಕ್ಕೆ ಹಾಡುತ್ತೀರಿ, ದಾವೀದನ ಹಾಗೆ ನಿಮಗೆ ನೀವೇ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತೀರಿ.


“ನನ್ನ ಎಲ್ಲಾ ಬುಗ್ಗೆಗಳು ನಿಮ್ಮಲ್ಲಿಯೇ ಇವೆ,” ಎಂದು ಸಂಗೀತಕಾರರು ಹಾಡುವರು.


ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.


ಹೀಗೆಯೇ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ಸಾಮಾನ್ಯ ಜನರೂ, ದೇವಾಲಯದ ಸೇವಕರೂ, ಸಮಸ್ತ ಇಸ್ರಾಯೇಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಏಳನೆಯ ತಿಂಗಳು ಬಂದಾಗ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ಅವನ ಸಂಗಡ ಇಸ್ರಾಯೇಲರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ದೇವಾಲಯದ ಸೇವಕರಲ್ಲಿಯೂ ಕೆಲವರು ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಹೋದರು.


ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.


ಓಬೇದ್ ಏದೋಮ್ ಮತ್ತು ಅವನ ಸಹಚರರಾದ ಅರವತ್ತೆಂಟು ಮಂದಿಯೂ, ದ್ವಾರಪಾಲಕರಾದ ಯೆದುತೂನನ ಮಗ ಓಬೇದ್ ಎದೋಮ್ ಮತ್ತು ಹೋಸ ನೇಮಕವಾಗಿದ್ದರು.


ಇದಲ್ಲದೆ ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು, ಸ್ವತಂತ್ರವಾದ ಕೊಠಡಿಗಳಲ್ಲಿ ವಾಸವಾಗಿದ್ದರು. ಏಕೆಂದರೆ ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.


ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ ಅರಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ, ವೀಣೆಗಳನ್ನೂ ಮಾಡಿಸಿದನು. ಅಂದಿನಿಂದ ಈ ದಿನದವರೆಗೂ ಅಂಥಾ ಸುಗಂಧದ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.


ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.


ಇದಲ್ಲದೆ ಯೆಹೋವ ದೇವರ ಮಂಜೂಷದ ಮುಂದೆ ಸೇವೆಮಾಡಲೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ಮರಿಸುವುದಕ್ಕೂ, ಕೊಂಡಾಡುವುದಕ್ಕೂ, ಹೊಗಳುವುದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.


ಇದಲ್ಲದೆ ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ ನಿಂತು, ಯೆಹೋವ ದೇವರನ್ನು ಕೊಂಡಾಡುವುದಕ್ಕೂ, ಯೆಹೋವ ದೇವರನ್ನು ಸ್ತುತಿಸುವುದಕ್ಕೂ,


ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದರು.


ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.


ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು