Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:3 - ಕನ್ನಡ ಸಮಕಾಲಿಕ ಅನುವಾದ

3 ಯೆದುತೂನನ ಪುತ್ರರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಈ ಆರು ಮಂದಿಯು ಯೆದುತೂನನ ಪುತ್ರರು. ತಮ್ಮ ತಂದೆ ಯೆದುತೂನನ ಕೈಕೆಳಗೆ ಕಿನ್ನರಿಗಳನ್ನು ಬಾರಿಸಿ, ಯೆಹೋವ ದೇವರನ್ನು ಕೊಂಡಾಡಿ, ಸ್ತುತಿಸಿ ಪ್ರವಾದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆದುತೂನ್ಯರಲ್ಲಿ - ಗೆದಲ್ಯ, ಚೆರೀ, ಯೆಶಾಯ, [ಶಿಮ್ಮೀ] ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ ಯೆಹೋವ ಕೀರ್ತನೆಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿಯೂ ಸಹಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:3
11 ತಿಳಿವುಗಳ ಹೋಲಿಕೆ  

ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು. ಮಹೋನ್ನತರೇ, ನಿಮ್ಮ ಹೆಸರನ್ನು ಕೀರ್ತಿಸುವುದು ಒಳ್ಳೆಯದು.


ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮಿ; ಯೆದುತೂನ್ಯರಲ್ಲಿ ಶೆಮಾಯ ಹಾಗೂ ಉಜ್ಜೀಯೇಲ್.


ಹದಿನಾಲ್ಕನೆಯವನು ಮತ್ತಿತ್ಯ; ಇವನೂ, ಇವನ ಸಹೋದರರೂ, ಮಕ್ಕಳೂ ಕೂಡಿ ಹನ್ನೆರಡು ಮಂದಿ.


ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದ್ ಏದೋಮ್, ಯೆಹೀಯೇಲ್, ಅಜಜ್ಯ ಎಂಬವರನ್ನು ಶೆಮಿನಿಥ್ ಎಂಬ ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸುವುದಕ್ಕೂ ನೇಮಿಸಿಕೊಂಡರು.


ಅವರ ಸಂಗಡ ಎರಡನೆಯ ದರ್ಜೆಯವರಾದ ತಮ್ಮ ಸಹೋದರರಾಗಿರುವ ಜೆಕರ್ಯನನ್ನೂ ಬೇನನನ್ನೂ ಯಾಜೀಯೇಲನನ್ನೂ, ಶೆಮೀರಾಮೋತನನ್ನೂ ಯೆಹೀಯೇಲನನ್ನೂ, ಉನ್ನೀಯನ್ನೂ, ಎಲೀಯಾಬನನ್ನೂ, ಬೆನಾಯನನ್ನೂ, ಮಾಸೇಯನನ್ನೂ, ಮತ್ತಿತ್ಯನನ್ನೂ, ಎಲೀಫೆಲೇಹುನನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಓಬೇದ್ ಏದೋಮನನ್ನೂ ಯೆಹೀಯೇಲನನ್ನೂ ನೇಮಿಸಿದರು.


ಯೆದುತೂನನ ಮಗ, ಗಲಾಲನ ಮಗ, ಶೆಮಾಯನ ಮಗ, ಓಬದ್ಯನೂ; ಎಲ್ಕಾನನ ಮಗ ಆಸನ ಮಗ ಬೆರೆಕ್ಯನೂ ಇವರು ನೆಟೋಫದವರ ಊರುಗಳಲ್ಲಿ ವಾಸವಾಗಿದ್ದರು.


ಅವರು ಯಾರೆಂದರೆ: ಆಸಾಫನ ಪುತ್ರರಲ್ಲಿ ಜಕ್ಕೂರ್, ಯೋಸೇಫ, ನೆತನ್ಯ, ಅಶರೇಲ; ಇವರು ಆಸಾಫನ ಕೈಕೆಳಗೆ ಪ್ರವಾದಿಸಿದರು. ಇವರು ಅರಸನ ಮೇಲ್ವಿಚಾರಣೆಯಲ್ಲಿದ್ದರು.


ಹೇಮಾನನ ಪುತ್ರರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂಯೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ್, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್, ಮಹಜೀಯೋತ್.


“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು