Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ, ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಹೀಗೆ ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:6
17 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ.


ಹಾಡುವವರು ಮುಂದಾಗಿಯೂ, ಬಾರಿಸುವವರು ಹಿಂದಾಗಿಯೂ, ದಮ್ಮಡಿ ಬಡಿಯುವ ಕನ್ಯೆಯರು ಮಧ್ಯದಲ್ಲಿಯೂ ಹಿಂಬಾಲಿಸುವರು.


ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”


ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡುವುದಕ್ಕೆ ನೇಮಕವಾದನು. ಅವನು ಸಂಗೀತದಲ್ಲಿ ನಿಪುಣನಾದ್ದರಿಂದ ಅವನು ಮುಖ್ಯಸ್ಥನಾಗಿದ್ದನು.


ಸಂಗೀತಗಾರರಾದ ಹೇಮಾನನೂ, ಆಸಾಫನೂ, ಏತಾನನೂ ಕಂಚಿನ ತಾಳಗಳನ್ನು ಬಾರಿಸುವವರು.


ಇದಲ್ಲದೆ ದಾವೀದನು ವಾದ್ಯಗಳನ್ನೂ ವಿಶೇಷವಾದ ವೀಣೆಗಳನ್ನೂ, ಕಿನ್ನರಿಗಳನ್ನೂ, ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನೂ ಎತ್ತುವ ಹಾಗೆ, ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವುದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.


ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ಸ್ವರಮಂಡಲ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ಯೆಹೋವ ದೇವರ ಮುಂದೆ ಹೋದರು.


ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.


ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ ಅರಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ, ವೀಣೆಗಳನ್ನೂ ಮಾಡಿಸಿದನು. ಅಂದಿನಿಂದ ಈ ದಿನದವರೆಗೂ ಅಂಥಾ ಸುಗಂಧದ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.


ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದರು.


ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.


ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಹೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ,


ಇದಲ್ಲದೆ ಆಸಾಫನ ಮಗ ಜಬ್ದೀಯ ಮಗ, ಮೀಕನ ಮಗ ಮತ್ತನ್ಯನು ಪ್ರಾರ್ಥನೆಯನ್ನು ಮತ್ತು ಕೃತಜ್ಞತಾಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಂಗಡಿಗರಲ್ಲಿ ಎರಡನೆಯವನು ಬಕ್ಬುಕ್ಯನು, ಅವನ ಸಂಗಡ ಯೆದುತೂನನ ಮಗ, ಗಲಾಲನ ಮಗ, ಶಮ್ಮೂವನ ಮಗ ಅಬ್ದನು.


ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು.


ಏಕೆಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿಯೇ ದೇವರಿಗೆ ಸ್ತೋತ್ರವನ್ನೂ, ಕೃತಜ್ಞತೆಯನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು