Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:20 - ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೇಲೆ ಕಂಡವರ ಕುಲಬಂಧುಗಳೂ ಹಾಗೂ ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುವ ಲೇವಿಯರ ಪಟ್ಟಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೇಲೆ ಕಂಡವರ ಕುಲಬಂಧುಗಳೂ ದೇವಾಲಯದ ಭಂಡಾರ, ಪರಿಶುದ್ಧವಸ್ತುಗಳ ಭಂಡಾರ ಇವುಗಳನ್ನು ಕಾಯುವವರೂ ಆದ ಲೇವಿಯರ ಪಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಹೀಯನು ಲೇವಿ ಕುಲದವನಾಗಿದ್ದನು. ಇವನು ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಯಾಗಿದ್ದನು. ಅಲ್ಲದೆ ಪವಿತ್ರ ಸಾಮಾಗ್ರಿಗಳನ್ನು ಇಡುವ ಸ್ಥಳದ ಮೇಲೆಯೂ ಇವನು ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:20
21 ತಿಳಿವುಗಳ ಹೋಲಿಕೆ  

ಯೆಹೀಯೇಲನ ಪುತ್ರರು ಜೇತಾಮನು, ಅವನ ಸಹೋದರನಾದ ಯೋಯೇಲನು; ಇವರು ಯೆಹೋವ ದೇವರ ಆಲಯದ ಬೊಕ್ಕಸಗಳ ಮೇಲೆ ಇದ್ದರು.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸಕ್ಕಾಗಿ ಬೊಕ್ಕಸಕ್ಕೆ 400 ಕಿಲೋಗ್ರಾಂ ಬಂಗಾರವನ್ನೂ, 2,800 ಕಿಲೋಗ್ರಾಂ ಬೆಳ್ಳಿಯನ್ನೂ, ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.


ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆಗಿರುವ ಶೆಬೂಯೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿದ್ದನು.


ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.


ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.


ಅವನು ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.


ಹೀಗೆಯೇ ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.


ಕೋರಹೀಯರ ಪುತ್ರರಲ್ಲಿಯೂ, ಮೆರಾರೀಯ ಪುತ್ರರಲ್ಲಿಯೂ ವಿಭಾಗಿಸಿದ ದ್ವಾರಪಾಲಕರ ವರ್ಗಗಳು ಇವೆ.


ಲದ್ದಾನನ ವಂಶಜರು: ಗೇರ್ಷೋನ್ಯನಾದ ಲದ್ದಾನನ ಪುತ್ರರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಈ ಗೇರ್ಷೋನ್ಯನಾದ ಲಡಾನನ ಮಗನು ಯೆಹೀಯೇಲನು.


ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.


ಅವರು ಯಾವ ಕಾರ್ಯದಲ್ಲಾದರೂ, ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ಮೀರಲಿಲ್ಲ.


ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.


ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು