Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:25 - ಕನ್ನಡ ಸಮಕಾಲಿಕ ಅನುವಾದ

25 ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಗ್ರಾಮಗಳಲ್ಲಿಯೂ, ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇವಿುಸಲ್ಪಟ್ಟವರು ಯಾರಂದರೆ - ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ ಹಳ್ಳಿಗಳಲ್ಲಿಯೂ ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್ ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್ ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:25
11 ತಿಳಿವುಗಳ ಹೋಲಿಕೆ  

ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.


ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.


ಆಗ ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಬೆಳ್ಳಿಬಂಗಾರವನ್ನು ತೆಗೆದು, ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ ಅವನಿಗೆ,


ಆದ್ದರಿಂದ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿಯೂ, ಅರಸನ ಮನೆಯ ಬೊಕ್ಕಸಗಳಲ್ಲಿಯೂ, ಸಿಕ್ಕಿದ ಸಮಸ್ತ ಬೆಳ್ಳಿಯನ್ನೂ ಕೊಟ್ಟನು.


ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಹೀಗಿರಲಾಗಿ ಅವನು ಈಜಿಪ್ಟ್ ದೇಶದಲ್ಲಿದ್ದ ಆ ಏಳು ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಪಟ್ಟಣಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.


ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ.


ಹೊಲವನ್ನು ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗ ಎಜ್ರಿಯು ಇದ್ದನು.


ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು,


ಅರಾಬಾ ತಗ್ಗಿನವನಾದ ಅಬೀ ಅಲ್ಬೋನನು; ಬಹರೂಮ್ಯನಾದ ಅಜ್ಮಾವೆತನು;


ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು