Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:18 - ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ, ರೆಕ್ಕೆಗಳನ್ನೂ ಚಾಚಿಕೊಂಡು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬುದನ್ನು ವಿವರಿಸಿ, ರೆಕ್ಕೆಗಳನ್ನು ಹರಡಿಕೊಂಡು ಯೆಹೋವನ ಒಡಂಬಡಿಕೆ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬದನ್ನು ವಿವರಿಸಿ ಹರಡಿದ ರೆಕ್ಕೆಗಳಿಂದ ಯೆಹೋವನ ನಿಬಂಧನಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಧೂಪವೇದಿಗೆ ಎಷ್ಟು ಅಪ್ಪಟ ಬಂಗಾರ ಬೇಕೆಂಬುದನ್ನು ದಾವೀದನು ತಿಳಿಸಿದನು. ಇದಲ್ಲದೆ ದೇವರ ಕೃಪಾಸನವನ್ನು ಮತ್ತು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ರೆಕ್ಕೆಗಳನ್ನು ಚಾಚಿಕೊಂಡಿರುವ ಕೆರೂಬಿದೂತರನ್ನು ತಯಾರಿಸಲು ನಕ್ಷೆಗಳನ್ನು ದಾವೀದನು ಸೊಲೊಮೋನನಿಗೆ ಕೊಟ್ಟನು. ಕೆರೂಬಿದೂತರನ್ನು ಚಿನ್ನದಿಂದ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:18
13 ತಿಳಿವುಗಳ ಹೋಲಿಕೆ  

ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ.


ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.


ಸೊಲೊಮೋನನು ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಚಿನ್ನದ ಮೇಜೂ,


ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.


ಅದೇ ಪ್ರಕಾರ ಮುಳ್ಳುಗಳೂ, ಪಾತ್ರೆಗಳೂ, ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿಗೋಸ್ಕರ, ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ; ಬೆಳ್ಳಿಯ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು