Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:11
51 ತಿಳಿವುಗಳ ಹೋಲಿಕೆ  

ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.


ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು! ಅವರ ಅದ್ಭುತಗಳು ಪರಾಕ್ರಮವಾದವುಗಳು! ಅವರ ರಾಜ್ಯವು ನಿತ್ಯವಾದ ರಾಜ್ಯವು, ಅವರ ಆಡಳಿತವು ತಲತಲಾಂತರಕ್ಕೂ ಇರುವುದು.


ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು; ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು.


ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.


ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನೂ, ಅದರಿಂದ ಉತ್ಪತ್ತಿಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ, ಅದರಲ್ಲಿ ಸಂಚರಿಸುವವರಿಗೆ ಆತ್ಮವನ್ನೂ ಕೊಡುತ್ತೇನೆಂದು ದೇವರಾದ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.


ಉತ್ತರದಿಂದ ಹೊನ್ನಿನ ಹೊಳಪು ಬರುತ್ತದೆ; ಅದರಂತೆಯೇ ದೇವರ ವಿಸ್ಮಯ ತೇಜಸ್ಸಿನಿಂದ ಬರುತ್ತಾರೆ.


ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ನನ್ನ ದೇವರಾದ ಯೆಹೋವ ದೇವರೇ, ನೀವು ಬಹಳ ದೊಡ್ಡವರಾಗಿದ್ದೀರಿ; ಘನತೆಯಿಂದಲೂ, ಪ್ರಭಾವದಿಂದಲೂ ಭೂಷಿತನಾಗಿರುವೆ.


ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.


ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.


ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.


ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.


ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.


ಅದಕ್ಕೆ ಅಬ್ರಾಮನು ಸೊದೋಮಿನ ಅರಸನಿಗೆ, “ಭೂಮಿ ಆಕಾಶವನ್ನು ಸ್ವಾಧೀನ ಪಡಿಸಿಕೊಂಡಿರುವ ಮಹೋನ್ನತ ದೇವರಾಗಿರುವ ಯೆಹೋವ ದೇವರ ಕಡೆಗೆ ನನ್ನ ಕೈ ಎತ್ತಿ ಪ್ರಮಾಣ ಮಾಡುತ್ತೇನೆ.


ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.


“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?


ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು. ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ.


ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.


ಇಗೋ, ಸಮಸ್ತ ಭೂಮಿಗೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನ್ ನದಿಯನ್ನು ದಾಟಿ ಹೋಗುವುದು.


ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.


ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.


ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.


ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು.


ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು