Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:12 - ಕನ್ನಡ ಸಮಕಾಲಿಕ ಅನುವಾದ

12 ಐಶ್ವರ್ಯವೂ, ಘನವೂ ನಿಮ್ಮ ಬಳಿಯಿಂದ ಬರುತ್ತವೆ. ನೀವು ಸಮಸ್ತವನ್ನು ಆಳಿಕೆಮಾಡುವವರು. ಶಕ್ತಿಯೂ, ಪರಾಕ್ರಮವೂ ನಿಮ್ಮ ಕೈಯಲ್ಲಿ ಇವೆ. ಎಲ್ಲರಿಗೂ ಉನ್ನತಿಯನ್ನೂ, ಬಲವನ್ನೂ ಕೊಡುವುದು ನಿಮ್ಮ ಕೈಯಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; ಎಲ್ಲಾ ದೊಡ್ಡಸ್ತಿಕೆಗೂ ಶಕ್ತಿಗೂ ನೀನೇ ಮೂಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:12
40 ತಿಳಿವುಗಳ ಹೋಲಿಕೆ  

ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ


ಆತನು ದಣಿದವನಿಗೆ ಶಕ್ತಿಯನ್ನೂ, ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.


ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.


ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.


ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?”


ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.


ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.


ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು?


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ಐಶ್ವರ್ಯವೂ ಘನತೆಯೂ, ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.


ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ.


ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದ ತರುವಾಯ ಯೆಹೋವ ದೇವರು ಅವನ ಸಂಪತ್ತನ್ನು ಪುನಃಸ್ಥಾಪಿಸಿದರು. ಯೆಹೋವ ದೇವರು ಯೋಬನಿಗೆ ಮೊದಲು ಇದ್ದವುಗಳಿಗಿಂತ ಎರಡರಷ್ಟು ಕೊಟ್ಟರು.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.


ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ, ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.


ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.


ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು