Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:2 - ಕನ್ನಡ ಸಮಕಾಲಿಕ ಅನುವಾದ

2 ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ, ಬಂಗಾರದ ಕೆಲಸಕ್ಕೋಸ್ಕರ ಬಂಗಾರವನ್ನೂ, ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ, ಕಂಚಿನ ಕೆಲಸಕ್ಕೋಸ್ಕರ ಕಂಚನ್ನೂ, ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ, ಮರದ ಕೆಲಸಕ್ಕೋಸ್ಕರ ಮರವನ್ನೂ, ಗೋಮೇಧಿಕ ರತ್ನಗಳನ್ನೂ; ಕೆತ್ತುವುದಕ್ಕೆ ರತ್ನ ವಿಚಿತ್ರವಾದಂಥ ಕಲ್ಲುಗಳನ್ನೂ; ಸಕಲ ಅಮೂಲ್ಯವಾದ ಕಲ್ಲುಗಳನ್ನೂ. ಅಮೃತ ಶಿಲೆಗಳನ್ನೂ ಬಹಳಷ್ಟು ಸಿದ್ಧಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ, ಇವುಗಳನ್ನೂ ಗೋಮೇಧಕ ರತ್ನ ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪುಹರಳು, ವಿವಿಧ ವರ್ಣದ ಕಲ್ಲು, ತರತರದ ಮಣೆ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕಾಗಿ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ ಗೋಮೇಧಕ ರತ್ನ, ಕೆತ್ತುವದಕ್ಕೆ ಬೇಕಾಗುವ ರತ್ನ, ಕೆಂಪರಲು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:2
22 ತಿಳಿವುಗಳ ಹೋಲಿಕೆ  

ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಅವರು ತಮಗೆ ಸಾಧ್ಯವಾದಷ್ಟು ಕೊಟ್ಟಿದ್ದಾರೆ. ಮಾತ್ರವಲ್ಲದೇ ತಮ್ಮ ಶಕ್ತಿ ಮೀರಿ ಕೊಟ್ಟಿದ್ದಾರೆ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ.


ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.


ಮುದ್ರೆ ಕೆತ್ತುವ ಪ್ರಕಾರ, ಗೋಮೇಧಿಕ ರತ್ನಗಳಲ್ಲಿ ಹನ್ನೆರಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿ ಬಂಗಾರದ ಕುಂದಣದಲ್ಲಿ ಇಟ್ಟರು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳಿರಬೇಕು.


ಆ ದೇಶದ ಬಂಗಾರವು ಉತ್ತಮವಾಗಿತ್ತು. ಅಲ್ಲಿ ಬದೋಲಖ ಧೂಪ ಮತ್ತು ಗೋಮೇಧಿಕ ರತ್ನ ಇದ್ದವು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


“ನೀನು ಎರಡು ಗೋಮೇಧಿಕ ರತ್ನಗಳನ್ನು ತೆಗೆದುಕೊಂಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.


ಇದಲ್ಲದೆ ಸೌಂದರ್ಯದ ನಿಮಿತ್ತವಾಗಿ ಅಮೂಲ್ಯವಾದ ರತ್ನಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮ್ ದೇಶದ್ದು.


ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು