Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:9
22 ತಿಳಿವುಗಳ ಹೋಲಿಕೆ  

ಅವರು ತಮಗೆ ಸಾಧ್ಯವಾದಷ್ಟು ಕೊಟ್ಟಿದ್ದಾರೆ. ಮಾತ್ರವಲ್ಲದೇ ತಮ್ಮ ಶಕ್ತಿ ಮೀರಿ ಕೊಟ್ಟಿದ್ದಾರೆ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ.


ಇಂದಿನ ಹಾಗೆಯೇ ಅವರ ಕಟ್ಟಳೆಗಳಲ್ಲಿ ನಡೆಯಲೂ, ಅವರ ಆಜ್ಞೆಗಳನ್ನು ಕೈಗೊಳ್ಳಲೂ, ನಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಹೃದಯಗಳು ಪೂರ್ಣವಾಗಿ ಒಪ್ಪಿಸಿಕೊಟ್ಟದ್ದಾಗಿರಲಿ,” ಎಂದನು.


ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.


ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಅವನು ಮನೆಗೆ ಬಂದು, ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು ಅವರಿಗೆ, ‘ನನ್ನ ಸಂಗಡ ಸಂತೋಷಪಡಿರಿ; ಕಳೆದುಹೋದ ಕುರಿ ನನಗೆ ಸಿಕ್ಕಿತು ಎನ್ನುವನು.’


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ನಾನು ಇಸ್ರಾಯೇಲ್ ನಾಯಕರೊಂದಿಗೂ ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. ಯೆಹೋವ ದೇವರನ್ನು ಸ್ತುತಿಸಿರಿ.


ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು.


ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.


ಇವನ ತರುವಾಯ ಯೆಹೋವ ದೇವರಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ 2,00,000 ಮಂದಿ ಪರಾಕ್ರಮಶಾಲಿಗಳು.


ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.


ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು.


ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.


ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು