Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:20 - ಕನ್ನಡ ಸಮಕಾಲಿಕ ಅನುವಾದ

20 ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:20
35 ತಿಳಿವುಗಳ ಹೋಲಿಕೆ  

ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.


ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.


ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು.


ತಿರುಗಿ ಸೌಲನು ದಾವೀದನನ್ನು ನೋಡುವುದಕ್ಕೋಸ್ಕರ ದೂತರನ್ನು ಕಳುಹಿಸಿ, “ಅವನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದನು.


ಮೋಶೆಯು ತನ್ನ ಕೈಯನ್ನು ಎತ್ತಿದಾಗ, ಇಸ್ರಾಯೇಲರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.


ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.


ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ಆದರೆ ಆಕೆಯು ಬಂಜೆಯಾಗಿದ್ದುದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವ ದೇವರನ್ನು ಬೇಡಿಕೊಂಡನು. ಯೆಹೋವ ದೇವರು ಅವನ ಬೇಡಿಕೆಯನ್ನು ಪೂರೈಸಿದರು. ಆದ್ದರಿಂದ ಅವನ ಹೆಂಡತಿ ರೆಬೆಕ್ಕಳು ಗರ್ಭಿಣಿಯಾದಳು.


ಅವರು ವೈರಿಗಳಿಂದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಐವತ್ತು ಸಾವಿರ ಒಂಟೆಗಳನ್ನು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳನ್ನು, ಎರಡು ಸಾವಿರ ಕತ್ತೆಗಳನ್ನು ಅಲ್ಲದೆ, ಒಂದು ಲಕ್ಷ ಜನರನ್ನು ಯುದ್ಧ ಕೈದಿಗಳನ್ನಾಗಿ ಸೆರೆಹಿಡಿದರು.


ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.


ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.


ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.


ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.


“ಗಾದನ ಮೇಲೆ ಸೈನ್ಯವು ದಾಳಿಮಾಡುವುದು, ಕೊನೆಗೆ ಅವನೇ ಅವರನ್ನು ಓಡಿಸಿಬಿಡುವನು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ಹೀಗೆ ಆ ಕಾಲದಲ್ಲಿ ಇಸ್ರಾಯೇಲರು ತಗ್ಗಿಹೋದರು. ಆದರೆ ಯೆಹೂದದವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಮೇಲೆ ಆತುಕೊಂಡದ್ದರಿಂದ ಜಯ ಹೊಂದಿದರು.


ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು.


ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂಬುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು