ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.