Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:29 - ಕನ್ನಡ ಸಮಕಾಲಿಕ ಅನುವಾದ

29 ಗಾಜವೂ, ಮನಸ್ಸೆಯ ಸಂತಾನದವರ ಮೇರೆಯಲ್ಲಿರುವ ಬೇತ್ ಷೆಯಾನೂ, ತಾನಕವೂ, ಮೆಗಿದ್ದೋ, ದೋರ್ ಮತ್ತು ಇವುಗಳ ಗ್ರಾಮಗಳು ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮನಸ್ಸೆಯ ಸಂತಾನದವರು ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಗ್ರಾಮಗಳನ್ನೂ ತಮ್ಮ ವಶದಲ್ಲಿಟ್ಟುಕೊಂಡಿದ್ದರು. ಯಕೋಬನ ಮಗ ಜೋಸೆಫನ ಸಂತತಿಯವರು ಈ ಎಲ್ಲಾ ಪ್ರದೇಶಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮನಸ್ಸೆಯ ಗಡಿಗೆ ಸಮೀಪದಲ್ಲಿದ್ದ ಊರುಗಳಾದ ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಮತ್ತು ಅದರ ಹತ್ತಿರದಲ್ಲಿದ್ದ ಸಣ್ಣ ಊರುಗಳು. ಯೋಸೇಫನ ಸಂತತಿಯವರು ಈ ಊರುಗಳಲ್ಲಿ ವಾಸವಾಗಿದ್ದರು. ಯೋಸೇಫನು ಇಸ್ರೇಲನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:29
12 ತಿಳಿವುಗಳ ಹೋಲಿಕೆ  

ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.


ಆ ದಿವಸದಲ್ಲಿ ಯೆರೂಸಲೇಮಿನಲ್ಲಿ ದೊಡ್ಡ ಗೋಳಾಟವಿರುವುದು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೋನಿನ ಗೋಳಾಟದ ಹಾಗೆಯೇ.


ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.


ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.


ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.


ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು.


ಸೌಲನ ಆಯುಧಗಳನ್ನು ಅಷ್ಟೋರೆತ್ ಮಂದಿರದಲ್ಲಿ ಇಟ್ಟು, ಅವನ ಶವವನ್ನು ಬೇತ್ ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು.


“ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು