Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:18 - ಕನ್ನಡ ಸಮಕಾಲಿಕ ಅನುವಾದ

18 ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದುವರೆಗೂ ಶಲ್ಲೂಮನ ಕುಟುಂಬಸ್ಥರು ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿದ್ದಾರೆ. ಇದಕ್ಕೆ ಮೊದಲು ಅವರು ಲೇವಿಯರ ಪಾಳೆಯಗಳ ಕಾವಲುಗಾರರಾಗಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶಲ್ಲೂಮ್ಯರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:18
11 ತಿಳಿವುಗಳ ಹೋಲಿಕೆ  

ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.


ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ದ್ವಾರಪಾಲಕರು ಯಾರೆಂದರೆ: ಶಲ್ಲೂಮನೂ, ಅಕ್ಕೂಬನೂ, ಟಲ್ಮೋನನೂ, ಅಹೀಮನ್‌ನೂ, ಅವರ ಸಹೋದರರೂ. ಅವರಲ್ಲಿ ಶಲ್ಲೂಮನು ಮುಖ್ಯಸ್ಥನಾಗಿದ್ದನು.


ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು.


ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು,


ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು.


ಯೆಹೋವ ದೇವರ ಆಲಯದ ಪ್ರಾಕಾರದ ಒಳಗೆ ಸಬ್ಬತ್ ದಿನದ ಆರಾಧನೆಗಾಗಿ, ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದನು, ಇವುಗಳನ್ನೆಲ್ಲ ಅಸ್ಸೀರಿಯದ ಅರಸನ ನಿಮಿತ್ತವಾಗಿ ಆಹಾಜನೇ ಬದಲಾಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು