Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:22 - ಕನ್ನಡ ಸಮಕಾಲಿಕ ಅನುವಾದ

22 ಬಾಗಿಲುಗಳಲ್ಲಿ ದ್ವಾರಪಾಲಕರಾಗಿರಲು ಆಯ್ಕೆಯಾದ ಇವರೆಲ್ಲರು 212 ಮಂದಿಯಾಗಿದ್ದರು. ಇವರು ಹೆಸರುಗಳು ಅವರವರ ಗ್ರಾಮಗಳಲ್ಲಿ ಅವರ ವಂಶಾವಳಿಯ ಪ್ರಕಾರ ಲಿಖಿತವಾಗಿದ್ದವು. ಇವರು ನಂಬಿಗಸ್ತರಾದ್ದರಿಂದ ದಾವೀದನೂ, ದರ್ಶಿಯಾದ ಸಮುಯೇಲನೂ ಇವರನ್ನು ಜವಾಬ್ದಾರಿಯ ಸ್ಥಾನಗಳಿಗೆ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಒಟ್ಟು ಇನ್ನೂರ ಹನ್ನೆರಡು ಮಂದಿ, ದ್ವಾರಪಾಲಕರಾಗಿ ನೇಮಕಗೊಂಡಿದ್ದರು. ಅವರು ನೆಲೆಸಿದ್ದ ಗ್ರಾಮಗಳಲ್ಲಿ ಅವರ ಹೆಸರುಗಳು ದಾಖಲಾಗಿದ್ದವು. ಈ ಜವಾಬ್ದಾರಿಯ ಸ್ಥಾನಗಳಿಗೆ ಅವರ ಪೂರ್ವಜರನ್ನು ನೇಮಿಸಿದವರು ಅರಸ ದಾವೀದನು ಮತ್ತು ಪ್ರವಾದಿ ಸಮುವೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಮಂದಿ; ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಗಳಲ್ಲಿ ಲಿಖಿತವಾಗಿದ್ದವು. ದಾವೀದನೂ ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೋಗಕ್ಕೆ ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:22
18 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.


ಇದಲ್ಲದೆ ಯಾಜಕರ, ಲೇವಿಯರ ವರ್ಗಗಳಿಗೋಸ್ಕರವೂ, ಯೆಹೋವ ದೇವರ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಯೆಹೋವ ದೇವರ ಮನೆಯಲ್ಲಿರುವ ಸೇವೆ ಮಾಡುವ ಸಮಸ್ತ ಪಾತ್ರೆಗಳಿಗೋಸ್ಕರವೂ ಸೂಚನೆಗಳನ್ನು ಕೊಟ್ಟನು.


ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.


ಯೆಹೂದದ ಲೇವಿಯರ ಕೆಲವು ವರ್ಗಗಳವರು ಬೆನ್ಯಾಮೀನಿನಲ್ಲಿಯೂ ವಾಸಿಸುತ್ತಿದ್ದರು.


ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.


ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ನಂಬಿಗಸ್ತಿಕೆಯಿಂದ ಸರತಿ ಸರತಿಯಾಗಿ ಹಿರಿಯರು ಕಿರಿಯರು ಎಂಬ ವ್ಯತ್ಯಾಸಮಾಡದೆ ಪಾಲು ಹಂಚುವುದಕ್ಕೆ ಏದೆನನೂ, ಮಿನ್ಯಾಮೀನನೂ, ಯೇಷೂವನ ಶೆಮಾಯನೂ, ಅಮರ್ಯನೂ, ಶೆಕನ್ಯನೂ ಇದ್ದರು.


ಇಗೋ, ಯೆಹೋವ ದೇವರ ಆಲಯದ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲಸಕ್ಕೂ, ಎಲ್ಲಾ ವಿಧವಾದ ಸೇವೆಗೂ, ಸಿದ್ಧ ಮನಸ್ಸುಳ್ಳಂಥ ಜಾಣತನದಿಂದ ಕೆಲಸ ಮಾಡುವವರು ನಿನ್ನ ಸಂಗಡ ಇದ್ದಾರೆ. ಇದಲ್ಲದೆ ಪ್ರಧಾನರೂ, ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ವಿಧೇಯರಾಗಿರುವರು.”


ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.


ಯೆದುತೂನನ ಮಗ, ಗಲಾಲನ ಮಗ, ಶೆಮಾಯನ ಮಗ, ಓಬದ್ಯನೂ; ಎಲ್ಕಾನನ ಮಗ ಆಸನ ಮಗ ಬೆರೆಕ್ಯನೂ ಇವರು ನೆಟೋಫದವರ ಊರುಗಳಲ್ಲಿ ವಾಸವಾಗಿದ್ದರು.


ಹೀಗೆಯೇ ಅವರಿಗೂ, ಅವರ ಮಕ್ಕಳಿಗೂ ಯೆಹೋವ ದೇವರ ಮನೆಯ ಬಾಗಿಲು ಕಾವಲಿತ್ತು. ಅದು ದೇವದರ್ಶನ ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರರಿಂದ ಕಾಯಬೇಕಾಗಿತ್ತು.


ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.


ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು