Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:1 - ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಎಂಬ ಪ್ರದೇಶಗಳಲ್ಲಿ ಚದರಿಹೋಗಿ ಪ್ರವಾಸಿಗಳಾದ ದೇವಜನರಿಗೆ ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚ್ಯಾ ಅಪೊಸ್ತಲಾನ್,ಪೆದ್ರುನ್, ಪೊಂತುಸಾನ್, ಗಾಲಾತ್ಸಿಯಾತ್, ಕಪ್ಪಾದೊಸಿಯಾತ್, ಆಸಿಯಾತ್, ಅನಿ ಬಿಥುನಿಯಾತ್ ಪಗ್ಳುನ್ ಗೆಲ್ಲ್ಯಾ ಸಗ್ಳ್ಯಾಕ್ನಿ ಲಿವ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:1
34 ತಿಳಿವುಗಳ ಹೋಲಿಕೆ  

ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶದವರೂ ಆಗಿರದೆ ದೇವಜನರೊಂದಿಗೆ ಜೊತೆ ನಾಗರಿಕರೂ ದೇವರ ಮನೆಯವರೂ ಆಗಿದ್ದೀರಿ.


ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.


ಚದರಿಹೋದವರು ತಾವು ಹೋದಲ್ಲೆಲ್ಲಾ ವಾಕ್ಯವನ್ನು ಬೋಧಿಸಿದರು.


ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು.


ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ಏಷ್ಯ ಸೀಮೆಯಲ್ಲಿ ಫುಗೇಲನೂ ಹರ್ಮೊಗೇನನೂ ಒಳಗೊಂಡು ಎಲ್ಲರೂ ನನ್ನನ್ನು ಬಿಟ್ಟು ಹೋದರೆಂಬುದನ್ನು ನೀನು ಬಲ್ಲೆ.


ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು:


ಏಷ್ಯಾದ ಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ನಿಮ್ಮನ್ನು ಹೃದಯಪೂರ್ವಕವಾಗಿ ವಂದಿಸುತ್ತಾರೆ.


ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು.


ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.


ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.


ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?


ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ;


ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.


ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು