Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:17 - ಕನ್ನಡ ಸಮಕಾಲಿಕ ಅನುವಾದ

17 ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಂಚ್ಯಾ ತೆಂಚ್ಯಾ ಕರ್ನ್ಯಾಂಚ್ಯಾ ಸಾರ್ಕೆ ತಿರ್ಮಾನ್ ಕರ್ತಲ್ಯಾ ದೆವಾಕ್ ತುಮಿ ಬಾಬಾ ಮನುನ್ ಬಲ್ವುಲ್ಯಾಸಿ, ತಸೆ ಹೊಲ್ಯಾರ್, ಹ್ಯಾ ಭಾಯ್ಲ್ಯಾ ಗಾಂವಾತ್ ತುಮಿ ತುಮ್ಚೆ ಭಕ್ತಿಚೆ ಅನಿ ದೆವಸ್ಪಾನಾಚೆ ಜಿವನ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:17
33 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.


“ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.


ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.


ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ದೇವರಲ್ಲಿ ಪಕ್ಷಪಾತವಿರುವುದಿಲ್ಲ.


ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ.


ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:


ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.


ಹೀಗಿರುವುದರಿಂದ ಶರೀರದಲ್ಲಿ ವಾಸಿಸುವವರೆಗೂ ನಾವು ಕರ್ತನಿಂದ ದೂರವಾಗಿದ್ದೇವೆಂದು ತಿಳಿದು, ನಾವು ಯಾವಾಗಲೂ ಭರವಸೆ ಉಳ್ಳವರಾಗಿದ್ದೇವೆ.


ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.


ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.


“ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಗೆ ಕಿವಿಗೊಡಿರಿ; ನನ್ನ ಕಣ್ಣೀರನ್ನು ನೋಡಿರಿ ಮೌನವಾಗಿರಬೇಡಿರಿ; ಏಕೆಂದರೆ, ನಾನು ನನ್ನ ಪಿತೃಗಳೆಲ್ಲರ ಹಾಗೆ ನಿಮ್ಮ ಸಂಗಡ ಪರದೇಶಸ್ಥನಂತೆ ವಾಸಿಸುತ್ತೇನೆ; ನಾನೂ ಪ್ರವಾಸಿಯಾಗಿದ್ದೇನೆ.


ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು.


ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.


ಅವನು, ‘ನೀವು ನನ್ನ ತಂದೆಯೂ ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು