Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:7 - ಕನ್ನಡ ಸಮಕಾಲಿಕ ಅನುವಾದ

7 ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಭಟ್ಟಿಕ್ ಘಾಲುನ್ ಗಾಳುನ್ ಬಗುನ್ ಹಾಳ್ ಹೊಯ್ ನಸಲ್ಲ್ಯಾ ಸೊನ್ಯಾನ್ಬಿ ಜಾಸ್ತಿ ಕಿಮ್ತಿಚೊ ತುಮ್ಚೊ ವಿಶ್ವಾಸ್, ಜೆಜು ಕ್ರಿಸ್ತ್ ದಿಸುನ್ ಯೆತಲ್ಯಾ ಎಳಾರ್ ತುಮ್ಕಾ ಕಿರ್ತಿ, ಮಾನಾ ಅನಿ ಮಹಿಮಾ ಕಮ್ವುನ್ ಘೆಯ್ ಸಾರ್ಕೆ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:7
53 ತಿಳಿವುಗಳ ಹೋಲಿಕೆ  

ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ನಾನು ನಿನ್ನನ್ನು ಪರಿಶೋಧಿಸಿದ್ದೇನೆ. ಆದರೆ ಬೆಳ್ಳಿಯಂತೆ ಅಲ್ಲ, ಸಂಕಟದ ಕುಲುಮೆಯಿಂದ ನಿನ್ನನ್ನು ಆಯ್ದುಕೊಂಡಿದ್ದೇನೆ.


ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.


ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.


ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.


“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು!


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


“ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


“ಆದ್ದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ಏಕೆಂದರೆ ಅವನು ಮಾಡಿಕೊಂಡ ದ್ರವ್ಯ ನಾಶವಾಯಿತು.


ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.


ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.


ನನ್ನ ಫಲವು ಬಂಗಾರಕ್ಕಿಂತಲೂ, ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,”


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಆದರೆ, ಆಂತರ್ಯದಲ್ಲಿ ಯೆಹೂದ್ಯನಾಗಿರುವವನೇ ಯೆಹೂದ್ಯನು. ಹಾಗೆಯೇ ಸುನ್ನತಿಯು ಆತ್ಮನಿಂದ ಹೃದಯದಲ್ಲಿ ಆಗುವಂಥದ್ದಾಗಿದೆ. ಇದು ಲಿಖಿತ ನಿಯಮದಿಂದ ಆಗುವಂಥದಲ್ಲ. ಅಂಥವನಿಗೆ ಮೆಚ್ಚುಗೆಯು ಮನುಷ್ಯರಿಂದ ಬರುವಂಥದಲ್ಲ, ದೇವರಿಂದಲೇ ಬರುವಂಥದ್ದಾಗಿದೆ.


ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.


“ಮನುಷ್ಯಪುತ್ರನಾದ ನನ್ನ ಪ್ರತ್ಯಕ್ಷತೆಯ ದಿನದಲ್ಲಿಯೂ ಹಾಗೆ ಇರುವುದು.


ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.


ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.


ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ, ಅವಳು ನಿರಪರಾಧಿಯಾಗಿದ್ದು ಸಂತಾನವನ್ನು ಪಡೆಯುವಳು.


ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು