Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:12 - ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ತುಮ್ಚಿ ಚಾಲ್ ಚಲ್ನ್ಯಾಕ್ ಬರಿ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್, ಖಲ್ಯಾ ಸಂಗ್ತಿಯಾಚ್ಯಾ ವಿಶಯಾತ್ ತೆನಿ ತುಮಿ ಚುಕಿದಾರ್ ಮನುನ್ ಮನ್ತಾತ್ ಅನಿ ತುಮ್ಚೆರ್ ಚುಕ್ ವಾವ್ತಾತ್ ತ್ಯಾಚ್ ವಿಶಯಾಂಚ್ಯಾ ವೈನಾ ತುಮ್ಚಿ ಬರಿ ಕಾಮಾ ಬಗುನ್ ತೆಚ್ಯಾ ಯೆನ್ಯಾಚ್ಯಾ ದಿಸಿ ದೆವಾಚಿ ತೆನಿ ಹೊಗ್ಳಾಪ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:12
46 ತಿಳಿವುಗಳ ಹೋಲಿಕೆ  

ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ಏಕೆಂದರೆ, ಕರ್ತ ಯೇಸುವಿನ ದೃಷ್ಟಿಯಲ್ಲಿ ಮಾತ್ರ ಅಲ್ಲ, ಜನರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡಬೇಕೆಂಬುದು ನಮ್ಮ ಪ್ರಯಾಸವಾಗಿದೆ.


ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.


ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.


ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.


ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.


ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.


ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”


ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.


ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಉತ್ತೀರ್ಣರಾದವರು ಎಂದು ಕಂಡುಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಸೋತವರಾಗಿ ಕಂಡುಬಂದರೂ ನೀವು ಒಳ್ಳೆಯದನ್ನೇ ಮಾಡಬೇಕೆಂಬುದು ನಮ್ಮ ಪ್ರಾರ್ಥನೆಯಾಗಿದೆ.


ಅವನ ಹೃದಯದ ರಹಸ್ಯಗಳು ಬಯಲಾಗುವುವು. ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, “ದೇವರು ನಿಜವಾಗಿಯೂ ನಿಮ್ಮ ಮಧ್ಯದಲ್ಲಿ ಇದ್ದಾರೆ!” ಎಂದು ಪ್ರಕಟಪಡಿಸುವನು.


ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.


ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.


ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.


“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.


ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.


ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.


ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು.


ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.


ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.


ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು