Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:16 - ಕನ್ನಡ ಸಮಕಾಲಿಕ ಅನುವಾದ

16 ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಆ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವಾಚ್ಯಾ ಸೆವಕಾಚ್ಯಾ ಸಾರ್ಕೆ ಸ್ವತಂತ್ರ್ ಹೊವ್ನ್ ಜಿವನ್ ಕರಾ, ತುಮ್ಚೆ ಸ್ವತಂತ್ರ್ ಬುರ್ಶೆ ಧಾಪುಸಾಟ್ನಿ ವಾಪ್ರುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:16
15 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು.


ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ.


ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.


ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.


ಸ್ವಾತಂತ್ರ್ಯವನ್ನು ಉಂಟುಮಾಡುವ ನಿಯಮದಿಂದ ನಾವು ತೀರ್ಪುಹೊಂದುವೆವು ಎಂದು ತಿಳಿದು, ನಮ್ಮ ಮಾತುಗಳೂ ಕೃತ್ಯಗಳೂ ಅದಕ್ಕೆ ಅನುಸಾರವಾಗಿರಲಿ.


ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.


ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ.


ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.


ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು